Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
    ಇತ್ತೀಚಿನ ಸುದ್ದಿ

    ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

    February 22, 2026
    Share

    ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
    ಸಿನಿಮಾ ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮಾತಾಡಿ, “ನಾನು 50 ಸಿನಿಮಾಗಳನ್ನು ಎಲ್ಲ ಭಾಷೆಯಲ್ಲೂ ಮಾಡಿದ್ದೆ. ನನಗೆ ಒಮ್ಮೆ ಗುಣಪಾಲ ಕಡಂಬ ಅವರು ಪುತ್ತೂರು ಕಂಬಳಕ್ಕೆ ಕರೆದಿದ್ರು. ಈ ವೇಳೆ ಕಂಬಳ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡ್ಬೇಕು ಅಂತ ಯೋಚನೆ ಬಂತು. ಹೀಗಾಗಿ ಅರುಣ್ ರೈ ಅವರಲ್ಲಿ ಸಿನಿಮಾ ಬಗ್ಗೆ ಹೇಳಿದ್ದೆ. ಅಲ್ಲಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಪರ್ಕಿಸಿ ಸಿನಿಮಾಕ್ಕೆ ಸಂಭಾಷಣೆ ಬರೆಯಲು ಹೇಳಿದೆವು. ಅಲ್ಲಿಂದ ಶುರುವಾದ ಈ ಸಿನಿಮಾ ಜರ್ನಿ ಈಗ ಬಿಡುಗಡೆಯ ಹಂತಕ್ಕೆ ಬಂದು ಮುಟ್ಟಿದೆ. ಸಿನಿಮಾದ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು ನಮ್ಮ ಧೈರ್ಯವನ್ನು ನೂರ್ಮಡಿಗೊಳಿಸಿದೆ. ಎಲ್ಲರೂ ಸಿನಿಮಾ ನೋಡಿ ಗೆಲ್ಲಿಸಿ“ ಎಂದರು.


    ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಡುಗಳನ್ನು ಬಿಡುಗಡೆಗೊಳಿಸಿದರು.
    ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕಾರಿ ನಿರ್ಮಾಪಕ ರಾಜೇಶ್ ಕುಡ್ಲ, ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ್, ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ಕೋಶಾಧಿಕಾರಿ ಲೊಕೇಶ್ ಶೆಟ್ಟಿ ಮುಚ್ಚೂರು ಕಲ್ಕುಡೆ, ರಾಜೀವ ಶೆಟ್ಟಿ, ಗುಣಪಾಲ ಕಡಂಬ, ಕೆ.ಕೆ.ಪೇಜಾವರ, ಶಶಿರಾಜ್ ಕಾವೂರು, ಮೈಮ್ ರಾಮದಾಸ್ ರಶ್ಮಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ ಕುರಿತು:
    ತಾರಾಗಣ: ಆದಿತ್ಯ, ರಾಧಿಕಾ ಚೇತನ್, ನವೀನ್ ಡಿ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು, ಉಷಾ ಭಂಡಾರಿ, ವೀಣಾ ಪೊನ್ನಪ್ಪ, ಗೀತಾ ಸುರತ್ಕಲ್, ಸ್ವರಾಜ್ ಶೆಟ್ಟಿ, ದಿವ್ಯಾ, ಶ್ರೀನಿವಾಸ್ ಗೌಡ, ಸುರೇಶ್ ಶೆಟ್ಟಿ, ಚೇತನ್ ರೈ ಮಾಣಿ, ಯುವ ಶೆಟ್ಟಿ, ಮೈಮ್ ರಮೇಶ್, ಪ್ರಕಾಶ್ ರೈ, ರವಿಶಂಕರ್, ಶೋಭರಾಜ್, ಸಂತೋಷ್ ಶೆಟ್ಟಿ
    ಬಾಬಾ ಬ್ಲೆಸ್ಸಿಂಗ್ ಫಿಲಂಸ್ ಲಾಂಛನದಲ್ಲಿ ತಯಾರಾಗಿರುವ ಚಿತ್ರಕ್ಕೆ ಕಥೆ- ಚಿತ್ರಕಥೆ- ನಿರ್ದೇಶನ: ಡಾ. ಎಸ್.ವಿ. ರಾಜೇಂದ್ರ
    ಸಿಂಗ್ ಬಾಬು ಅವರದ್ದು.


    ನಿರ್ಮಾಪಕರು: ಡಾ. ವಿನಿತಾ ವಿಜಯ್ ಕುಮಾರ್ ರೆಡ್ಡಿ ಮತ್ತು ಅರುಣ್ ರೈ ತೋಡಾರ್,
    ಕಾರ್ಯಕಾರಿ ನಿರ್ಮಾಪಕ: ರಾಜೇಶ್ ಕುಡ್ಲ, ಸಂಭಾಷಣೆ: ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಛಾಯಾಗ್ರಾಣ : ಆರ್ ಗಿರಿ, ಸಂಕಲನ : ಶ್ರೀನಿವಾಸ್ ಪಿ ಬಾಬು, ಕಲಾ ನಿರ್ದೇಶನ: ಚಂದ್ರಶೇಖರ್ ಸುವರ್ಣ ಮೂಲ್ಕಿ, ಸಹ ನಿರ್ದೇಶಕರು: ಬೆನಕ ಕೊಟ್ರೇಶ್, ಅಕ್ಷತ್ ವಿಟ್ಲ, ಆಡಿಯೋ ಕಂಪನಿ : ಲಹರಿ ಆಡಿಯೋ, ತುಳು ಸಾಹಿತ್ಯ : ವಿಜಯ್ ಕುಮಾರ್ ಕೊಡಿಯಲ್ ಬೈಲ್ , ಕೆ ಕೆ ಪೇಜಾವರ್, ಶಶಿರಾಜ್ ಕಾವೂರು , ನವೀನ್ ಎಡ್ಮೆಮಾರ್, ಕನ್ನಡ ಸಾಹಿತ್ಯ :ರಘು ಶಾಸ್ತ್ರಿ
    ಅವರದ್ದಾಗಿದೆ.

    Post Views: 191

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.