Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಜಾತಿ ನಿಂದನೆ ಆರೋಪದ ಪ್ರಕರಣ : ಯಕ್ಷಗಾನ ಕಲಾವಿದರು ಖುಲಾಸೆ.
    ಇತ್ತೀಚಿನ ಸುದ್ದಿ

    ಮಂಗಳೂರು : ಜಾತಿ ನಿಂದನೆ ಆರೋಪದ ಪ್ರಕರಣ : ಯಕ್ಷಗಾನ ಕಲಾವಿದರು ಖುಲಾಸೆ.

    March 1, 2026
    Share

    ಮಂಗಳೂರು : ಅಪರೂಪದ ಪ್ರಕರಣದಲ್ಲಿ ಯಕ್ಷ ಕಲಾವಿದರಿಬ್ಬರು ಜಾತಿನಿಂದನೆ ಆರೋಪದ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದಾರೆ. ಮಂಗಳೂರಿನ ಮಾನ್ಯ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.ಪ್ರಕರಣದ ಹಿನ್ನೆಲೆ: ಕರ್ನಾಟಕ ಮೇಳದ ಪ್ರಸಿದ್ದ ಪ್ರಸಂಗ ಬ್ರಹ್ಮ ಬಲಾಂಡಿ ಎನ್ನುವ ಪ್ರಸಂಗವನ್ನು ಯಕ್ಷ ಕಲಾವಿದ ಸಂಘಟಕ ಪೂರ್ಣೇಶ್ ಎಂಬವರು ಪುರಭವನದಲ್ಲಿ ಸಂಯೋಜಿಸಿದ್ದರು. ಆ ಪ್ರಸಂಗದಲ್ಲಿ ಅದರ ರಚನೆಕಾರರು ಅನಂತರಾಮ ಬಂಗಾಡಿಯವರು ಸೃಷ್ಟಿಸಿದ ಲಾತ್ರಗಳ ಹೆಸರನ್ನು ಯಥಾವತ್ತಾಗಿ ಕರಪತ್ರಗಳಲ್ಲಿ ಮುದ್ರಿಸಿ ಹಂಚಲಾಗಿತ್ತು ಮತ್ತು ಆ ಪಾತ್ರಗಳ ಹೆಸರಿನ ಉಲ್ಲೇಖ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಯಿದೆಯ ಅಡಿಯಲ್ಲಿ ಜಾತಿ ನಿಂದನೆ ಎಂದು ದಲಿತ ಸಂಘಟನೆಗಳು ಪೋಲೀಸರಿಗೆ ದೂರು ನೀಡಿದ್ದರು.

    ಅದರಂತೆ ಪೋಲೀಸರು ಪೂರ್ಣೇಶ್ ಮತ್ತು ಮಿಜಾರು ತಿಮ್ಮಪ್ಪ ಎಂಬವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಲಮು 3 (1) (r) (u) (s) ರ ಅಡಿಯಲ್ಲಿ ಜಾತಿನಿಂದನೆ ಕೇಸು ದಾಖಲಿಸಿ ಮಾನ್ಯ ಎರಡನೆ ಹೆಚ್ಚುವರಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಹಲವಾರು ಸಾಕ್ಷಿಗಳನ್ನು ದೂರುದಾರರು ಹಾಜರುಪಡುಸಿದ್ದರು. ಆ ನಂತರ ಸಂಘಟಕರು ಸದ್ರಿ ಯಕ್ಷಗಾನವನ್ನು ರದ್ದುಪಡಿಸಿ ಬೇರೆ ಪ್ರಸಂಗವನ್ನು ಆಯೋಜಿಸಿದ್ದರು.

    ಪ್ರಕರಣದ ಸಮಗ್ರ ತನಿಖೆ ನಡೆದು ವಾದ ಪ್ರತಿವಾದವನ್ನು ಆಲಿಸಿದ ಮಾನ್ಯ ನ್ಯಾಯಾಲಯ ಆರೋಪಿಗಳನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ವಾದಿಸಿದ್ದರು.

    Post Views: 85

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.