Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ರಸ್ತೆಯಲ್ಲಿ ಅಪಾಯಕಾರಿಯಾಗಿ ವೀಲಿಂಗ್- ಯುವಕ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ರಸ್ತೆಯಲ್ಲಿ ಅಪಾಯಕಾರಿಯಾಗಿ ವೀಲಿಂಗ್- ಯುವಕ ಪೊಲೀಸರ ವಶಕ್ಕೆ

    March 3, 2026
    Share

    ಬೆಳ್ತಂಗಡಿ: ಹಲವು ಸಮಯಗಳಿಂದ ಉಜಿರೆ-ಬೆಳ್ತಂಗಡಿಯ ರಸ್ತೆಗಳಲ್ಲಿ ವಿವಿಧ ಭಂಗಿಗಳಲ್ಲಿ ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ವೀಲಿಂಗ್ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


    ಬೆಳ್ತಂಗಡಿ ತಾಲೂಕಿನ ಉಜಿರೆ ಜಂಕ್ಷನ್ ರಸ್ತೆಯಲ್ಲಿ ಫೆ.8 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ ಎಂಬವರು ಕರ್ತವ್ಯದ ವೇಳೆ ಹೆಲ್ಮೆಟ್ ಧರಿಸದೆ ಆಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಯ ಪ್ರಾಣಕ್ಕೆ ಹಾನಿಯಾಗುವಂತೆ ವೀಲಿಂಗ್ ಮಾಡಿಕೊಂಡು ಧರ್ಮಸ್ಥಳ ರಸ್ತೆಯ ಮೂಲಕ ಪರಾರಿಯಾಗಿದ್ದ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆಯ ವರದಿಯನ್ನು ಮಾಡಿದ್ದರು. ಬಳಿಕ ಈತ ವಿವಿಧ ಕಡೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೋಗಳನ್ನು ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು ಅದ್ರೆ ಸವಾರ ಮಾತ್ರ ಪೊಲೀಸರ ಕೈಗೆ ಸಿಗುತ್ತಿರಲಿಲ್ಲ.

    ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ಅವರ ನೇತೃತ್ವದ ತಂಡ ಮಾ.೨ ರಂದು ಬೆಳ್ತಂಗಡಿ, ಉಜಿರೆ ಕಡೆ ಹುಡುಕಾಟ ನಡೆಸಿ ಸವಾರನ ಬಗ್ಗೆ ಮಾಹಿತಿದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಅಪಾಯಕಾರಿ ವೀಲಿಂಗ್ ಮಾಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೂಜಿಲಾ ನಿವಾಸಿ ಬಾಸ್ಕರ ಗೌಡ ಎಂಬವರ ಪುತ್ರ ಸಂಪತ್(30) ಎಂಬಾತನನ್ನು ಪತ್ತೆ ಹಚ್ಚಿ ಆತ ವೀಲಿಂಗ್ ಮಾಡಲು ಬಳಸಿ ಕಪ್ಪು ಬಣ್ಣದ ಹಿಮಾಲಯನ್ KA-21-EE-1486 ನಂಬರಿನ ಬೈಕ್ ಸಮೇತ ವಶಕ್ಕೆ ಪಡೆದುಕೊಂಡು ಕಲಂ 281 BNS 184,189 IMV ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಮತ್ತು ವೃತ್ತ ನಿರೀಕ್ಷಕ ರವಿ ಬಿ.ಎಸ್. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ. ನೇತೃತ್ವದಲ್ಲಿ ಸಿಬ್ಬಂದಿ ಡ್ಯಾನಿ ಫ್ರಾನ್ಸಿಸ್ ತಾವ್ರೋ, ಇಬ್ರಾಹಿಂ, ಅಭಿಜಿತ್, ಹಿತೋಷ್, ಜಾವೀದ್ ಪಾಟೀಲ್, ಚಾಲಕ ಸತ್ಯಪ್ರಕಾಶ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

    Post Views: 118

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.