Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಚೂರಿ ಇರಿತ ಪ್ರಕರಣ-ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಚೂರಿ ಇರಿತ ಪ್ರಕರಣ-ನಾಲ್ವರ ಬಂಧನ

    March 4, 2026
    Share

    ಮಲ್ಪೆ :  ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರ ತಂಡ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು 5 ಮಂದಿ ಯುವಕರನ್ನು  ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದ್ದಾಗಿ ಉಡುಪಿ ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

    ಮಲ್ಪೆ ಬೀಚ್ ಸಮೀಪ ನಡೆದ ಚಾಕು ದಾಳಿ ಪ್ರಕರಣದಲ್ಲಿ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕಾನೂನಿನ ಸಂಘರ್ಷಕ್ಕೋಳಗಾದ ಬಾಲಕನನ್ನೂ ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುತ್ತಿದೆ.

    ಮಾರ್ಚ್ 3ರಂದು ರಾತ್ರಿ ಸುಮಾರು 9.30ಕ್ಕೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಬೀಚ್ ಬಳಿ ಇರುವ ಬ್ಲೂ ವೇವ್ಸ್ ಗೆಸ್ಟ್ ಹೌಸ್ ಸಮೀಪ ಈ ಘಟನೆ ನಡೆದಿದೆ. ಆರೋಪಿತರಾದ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನಿತ್ ಪೂಜಾರಿ ಮತ್ತು ಅಭೀಜಿತ್ ಅವರು ಬಾಲಕನೊಂದಿಗೆ ಸೇರಿ ಒಂದೇ ಉದ್ದೇಶದಿಂದ ಅಕ್ರಮ ಕೂಟ ಸೇರಿಕೊಂಡು, KA19AD1036 ಸಂಖ್ಯೆಯ ಬಿಳಿ ಬೊಲೆರೊ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಅಮೃತ್ ಭಂಡಾರಿಯ ತಂಗಿಯ ವಿಚಾರವಾಗಿ ತಗಾದೆ ತೆಗೆದ ಆರೋಪಿಗಳು, ಅಲ್ಲಿ ಮರಳಿನಲ್ಲಿ ಕುಳಿತಿದ್ದ ಸಂತೋಷ್ ಎ. ಅಮೀನ್ ಹಾಗೂ ಅವರ ಸ್ನೇಹಿತರಾದ ಮಂಜುನಾಥ ಸಾಲಿಯಾನ್ @ ಮಂಜು ಕೊಳ, ಧನುಷ್, ಲತೀಶ್ ಮತ್ತು ವರುಣ್ ಅವರೊಂದಿಗೆ ಜಗಳ ಆರಂಭಿಸಿದ್ದಾರೆ.

    ಈ ವೇಳೆ ಮಂಜುನಾಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಜ್ಞೇಶ್ ತನ್ನ ಪ್ಯಾಂಟ್ ಕಿಸೆಯಲ್ಲಿದ್ದ ಚಾಕುವಿನಿಂದ ಮಂಜುನಾಥರ ಹೊಟ್ಟೆಯ ಎಡಭಾಗಕ್ಕೆ ಚುಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಇದೇ ವೇಳೆ ವರುಣ್ ಮತ್ತು ಲತೀಶ್ ಅವರಿಗೂ ಚಾಕುವಿನಿಂದ ಗಾಯವಾಗಿದ್ದು, ತಡೆಯಲು ಬಂದ ಸಂತೋಷ್, ಧನುಷ್ ಸೇರಿದಂತೆ ಇತರರಿಗೆ ಕೈ ಹಾಗೂ ಕಾಲಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದ ತನಿಖೆಯನ್ನು ಕೈಗೊಂಡ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಈರಣ್ಣ ಶಿರಗುಂಪಿ ಅವರು ಆರೋಪಿಗಳಾದ ಅಮೃತ್ ಭಂಡಾರಿ (22), ಮೂಡುಪಲಿಮಾರು, ಕಾಪು ತಾಲೂಕು ಪ್ರಜ್ಞೇಶ್ (22), ಪಲಿಮಾರು ಗ್ರಾಮ, ಕಾಪು ತಾಲೂಕು ಪುನಿತ್ ಪೂಜಾರಿ (24), ಪಲಿಮಾರು ಗ್ರಾಮ, ಕಾಪು ತಾಲೂಕು ಅಭೀಜಿತ್ (20), ಗಾಂದೊಟ್ಟು, ಇನ್ನಾ ಗ್ರಾಮ, ಕಾರ್ಕಳ ತಾಲೂಕು ಇವರನ್ನು ಬಂಧಿಸಿದ್ದು, ತನಿಖೆ ಪೂರ್ಣಗೊಳಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕಾರ್ಯಾಚರಣೆಯನ್ನು ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಮಲ್ಪೆ ವೃತ್ತದ ಸಿಪಿಐ ರಾಮಚಂದ್ರ ನಾಯಕ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಈರಣ್ಣ ಶಿರಗುಂಪಿ ಹಾಗೂ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

    Post Views: 219

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.