Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳದ ಹೋಟೆಲ್‌ ಮಾಲಕನ ಹತ್ಯೆ : ಬೆಳ್ತಂಗಡಿಯ ಯುವಕ ಅರೆಸ್ಟ್!!
    ಇತ್ತೀಚಿನ ಸುದ್ದಿ

    ಕೇರಳದ ಹೋಟೆಲ್‌ ಮಾಲಕನ ಹತ್ಯೆ : ಬೆಳ್ತಂಗಡಿಯ ಯುವಕ ಅರೆಸ್ಟ್!!

    April 10, 2026
    Share

    ಬೆಳ್ತಂಗಡಿ: ತಾನು ಕೆಲಸ ಮಾಡುತ್ತಿದ್ದ ಕೇರಳದ ಹೋಟೆಲ್‌ನ ಮಾಲಕನನ್ನೇ ಏ.6ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಪೆರ್ದಾಡಿ ನಿವಾಸಿ ಉಮರಬ್ಬ ಎಂಬವರ ಪುತ್ರ ಇರ್ಷಾದ್ (32) ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚಡಯಮಂಗಳ- ಕುರಿಯೋಡು ಸ್ವೈಸಿ ಎಂಬ ಹೆಸರಿನ ಹೊಟೇಲ್ ಉದ್ಯಮ ನಡೆಸುತ್ತಿದ್ದ ಮಾಲೀಕ ಶಕೀ‌ರ್ ಹುಸೈನ್ ಎಂಬವರನ್ನು ಇರ್ಷಾದ್ ಕೊಲೆ ಮಾಡಿದ್ದಾನೆ.

    ಬಿರಿಯಾಣಿ ಪಾಕ ತಜ್ಞನಾಗಿದ್ದ ಬೆಳ್ತಂಗಡಿಯ ಇರ್ಷಾದ್ ತಾನು ಕೆಲಸ ಮಾಡುತ್ತಿದ್ದ ಹೋಟೆಲ್‌ಗೆ ಬರುತ್ತಿದ್ದ ಅಕ್ಕಿ ಮೂಟೆಯಲ್ಲಿರುವ 50,100,150 ರೂಪಾಯಿಗಳ ಕೂಪನ್‌ಗಾಗಿ ನಡೆದ ಜಗಳದಿಂದ ಈ ಕೃತ್ಯವೆಸಗಿದ್ದಾನೆ. ಅಕ್ಕಿಮೂಟೆಯಲ್ಲಿ ಬರುತ್ತಿದ್ದ ಕೂಪನ್ ಒಟ್ಟು ಸೇರಿಸಿ ಮಾಲಕರಿಗೆ ಕೊಡಬೇಕೆಂದು ಹೊಟೇಲ್ ಮಾಲಕ ಕೇರಳದ ಆಕಲ್ ನಿವಾಸಿ ಶಕೀರ್ ಹುಸೈನ್ ನಿರ್ದೇಶನ ನೀಡಿದ್ದರು. ಅದಾಗ್ಯೂ ಇರ್ಷಾದ್ ಕೂಪನ್‌ಗಳನ್ನು ತಾನೇ ಸಂಗ್ರಹಿಸಿಟ್ಟುಕೊಂಡಿದ್ದ. ಇದನ್ನುಪ್ರಶ್ನಿಸುವ ಸಲುವಾಗಿ ಪತ್ನಿಯೊಂದಿಗೆ ಆತ ವಿಶ್ರಾಂತಿ ಪಡೆಯುತ್ತಿದ್ದ ವಸತಿ ಗೃಹದ ಎರಡನೇ ಮಹಡಿಗೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇರ್ಷಾದ್ ಚಾಕು ತೆಗೆದು ಮಾಲಕನ ಎದೆಗೆ ಬಲವಾಗಿ ಚುಚ್ಚಿದ್ದಾನೆ ಎನ್ನಲಾಗಿದೆ.

    ಕೇರಳ ಹೊಟೇಲ್ ಮಾಲೀಕ ಶಕೀರ್ ಹುಸೈನ್ ಅವರನ್ನು ಏ.6ರಂದು ಕೊಲೆ ಮಾಡಿದ ತಕ್ಷಣ ಬಟ್ಟೆ ಬದಲಿಸಿ ಅದೇ ಹೊಟೇಲ್‌ನ ಸಿಬ್ಬಂದಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸ್ಥಳದಿಂದ ಪರಾರಿಯಾಗುವಾಗ ಚಡಯಮಂಗಳ ಮತ್ತು ಮನ್ನಾಂದಲ ಪೊಲೀಸರು ಹಾಗೂ ಊರವರ ಸಹಕಾರದೊಂದಿದೆ ಕೆಎಸ್‌ಆರ್‌ಟಿಸಿ ಬಸ್ಸು ಹತ್ತಿ ಪ್ರಯಾಣಿಸುತ್ತಿದ್ದಾಗ ಇರ್ಷಾದ್‌ನನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಕೊಲ್ಲಂ ಜೈಲಿಗೆ ಕಳುಹಿಸಲಾಗಿದೆ.

    Post Views: 105

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.