Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಂತೂರು ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ನಂತೂರು ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸವಾರ ಮೃತ್ಯು

    April 14, 2026
    Share

    ಮಂಗಳೂರು: ನಂತೂರು ತಾರಾಯಿತೋಟ ಎಂಬಲ್ಲಿ ಕಳೆದ ಶನಿವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಧರ್ಮಸ್ಥಳ ಮೂಲದ ಬೈಕ್ ಸವಾರ ಗೋಪಾಲಕೃಷ್ಣ (27) ಎಂಬಾತ ಅತಿವೇಗವಾಗಿ ಬೈಕ್ ಚಲಾಯಿಸಿ, ಓವರ್‌ಟೇಕ್ ಮಾಡುವ ಭರದಲ್ಲಿ ಮೋಹನ್ ಚಂದರ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿಯ ರಭಸಕ್ಕೆ ಗೋಪಾಲಕೃಷ್ಣ ಟಿಪ್ಪರ್‌ಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರೆ, ರಸ್ತೆಗೆ ಎಸೆಯಲ್ಪಟ್ಟ ಮೋಹನ್ ಚಂದರ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.
    ಅಪಘಾತದ ದೃಶ್ಯವು ಟೆಂಪೋ ಒಂದರ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಟೆಂಪೋ ಚಾಲಕ ಗಂಗಾಧರ್ ಅವರು ತಕ್ಷಣ ಮೋಹನ್ ಅವರನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮೋಹನ್ ಚಂದರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪದವಿನಂಗಡಿಯಲ್ಲಿ ಸ್ಟುಡಿಯೋ ಹೊಂದಿದ್ದರು.

    Post Views: 132

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.