Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಜನರೇ ಎಚ್ಚರ… ವಕ್ಕರಿಸಿದೆ ಹಕ್ಕಿ ಜ್ವರ! ಸಾಕಣೆ ಕೇಂದ್ರದಲ್ಲಿ H5N1 ಪತ್ತೆ
    ಇತ್ತೀಚಿನ ಸುದ್ದಿ

    ರಾಜ್ಯದ ಜನರೇ ಎಚ್ಚರ… ವಕ್ಕರಿಸಿದೆ ಹಕ್ಕಿ ಜ್ವರ! ಸಾಕಣೆ ಕೇಂದ್ರದಲ್ಲಿ H5N1 ಪತ್ತೆ

    April 17, 2026
    Share

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದ್ದು, ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಎಚ್5ಎನ್1 (H5N1) ವೈರಸ್ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಲಾದ ಮೊದಲ ಹಂತದ ತಪಾಸಣೆಯಲ್ಲೇ ಈ ಮಾರಕ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

    ಹೆಸರಘಟ್ಟದ ಪಶುಸಂಗೋಪನಾ ಇಲಾಖೆಯ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕಳೆದ ಕೆಲವು ದಿನಗಳಿಂದ ಕೋಳಿಗಳು ಅಸಹಜವಾಗಿ ಮೃತಪಡುತ್ತಿದ್ದವು. ಈ ಹಿನ್ನೆಲೆಯಲ್ಲಿ ನಡೆಸಲಾದ ಪ್ರಯೋಗಾಲಯ ಪರೀಕ್ಷೆಯ ವರದಿಯು ಹಕ್ಕಿ ಜ್ವರವನ್ನು ಖಚಿತಪಡಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೋಂಕಿತ ಫಾರಂನಲ್ಲಿದ್ದ ಸಾವಿರಾರು ಕೋಳಿಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಗುಂಡಿ ತೆಗೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದ್ದು, ಇಡೀ ಪ್ರದೇಶವನ್ನು ಸ್ಯಾನಿಟೈಸ್ ಮಾಡಲಾಗಿದೆ.

    ಹೆಸರಘಟ್ಟದ ಈ ಪ್ರಮುಖ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿಗಳನ್ನು ಸರಬರಾಜು ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಶು ವೈದ್ಯಾಧಿಕಾರಿಗಳು, ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ. ಸೋಂಕು ಪತ್ತೆಯಾದ ಸ್ಥಳದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದ್ದು, ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಕೋಳಿ ಸಾಕಾಣಿಕೆ ಶೆಡ್‌ಗಳು ಮತ್ತು ಮಾಂಸದ ಅಂಗಡಿಗಳಲ್ಲಿ ಕಡ್ಡಾಯ ತಪಾಸಣೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ.

    ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಮತ್ತು ಸಾಕಾಣಿಕೆದಾರರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಬೆನ್ನಲ್ಲೇ ಈ ವೈರಸ್ ಕಾಣಿಸಿಕೊಂಡಿರುವುದು ಪೌಲ್ಟ್ರಿ ಉದ್ಯಮಕ್ಕೂ ಆತಂಕ ತಂದಿದೆ.

    ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರು ಎಚ್ಚರವಹಿಸುವಂತೆ ವೈದ್ಯಕೀಯ ತಜ್ಞರು ಸೂಚಿಸಿದ್ದಾರೆ. ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ (ಕನಿಷ್ಠ 70°C ಗಿಂತ ಹೆಚ್ಚಿನ ಉಷ್ಣಾಂಶದಲ್ಲಿ) ಸೇವಿಸುವುದರಿಂದ ವೈರಸ್ ಹರಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅರೆಬರೆ ಬೇಯಿಸಿದ ಅಥವಾ ಹಸಿ ಮಾಂಸದ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

    ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಂಡಗಳು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಯಾವುದೇ ಅಧಿಕೃತ ಮಾಹಿತಿ ಇಲ್ಲದೆ ಆತಂಕಕ್ಕೆ ಒಳಗಾಗಬಾರದೆಂದು ಮನವಿ ಮಾಡಲಾಗಿದೆ.

    Post Views: 207

    Related Posts

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.