Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!
    ಇತ್ತೀಚಿನ ಸುದ್ದಿ

    ಅನುಮಾನಾಸ್ಪದ ಸಾವು ಕೇಸ್ ಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಪ್ರಿಯಕರನ ಜೊತೆ ಸೇರಿ ಪತಿಯ ಕೊಂದ ಪತ್ನಿ!

    April 19, 2026
    Share

    ಮೈಸೂರು : ನಿನ್ನೆ ಮೈಸೂರಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ ಸಿಕ್ಕಿದ್ದು, ಮೃತ ಜವರಪ್ಪನನ್ನು ಹಾಕೆ ಪತ್ನಿಯೇ ಪ್ರಿಯಕರಣ ಜೊತೆಗೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿ ಎಂದು ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ್ದಾಳೆ.

    ಹೌದು ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ.

    ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತಾ ತವರಿಗೆ ಹೋಗಿದ್ದಳು.ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಮನೆಗೆ ಹಿಂದಿರುಗಿ ಬಂದಿರಲಿಲ್ಲ.

    ಬದಲಾಗಿ ಮರುದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆ ಜವರಪ್ಪ ಸಹೋದರ ರವಿ ನೀಡಿದ್ದ ದೂರಿನ ಅನ್ವಯ ತನಿಖೆಗಿಳಿದ ಪೊಲೀಸರು ಸಾವಿನ ಹಿಂದಿನ ಸತ್ಯವನ್ನು ರಿವೀಲ್​​ ಮಾಡಿದ್ದಾರೆ. ಆರೋಪಿ ಸಿದ್ದೇಶ್​​ಗೆ ಜವರಪ್ಪ ಪತ್ನಿ ಅಮೃತಾ ಜೊತೆಗೆ ಅಕ್ರಮ ಸಂಬಂಧ ಇತ್ತು. ಹೀಗಾಗಿ ಆತ ಇದ್ದರೆ ತಮ್ಮ ಸಂಬಂಧಕ್ಕೆ ತೊಂದರೆ ಆಗುತ್ತೆ ಎಂದು ಆರೋಪಿಗಳು ಜವರಪ್ಪನ ಕೊಲೆಗೆ ಪ್ಲ್ಯಾನ್​​ ಮಾಡಿದ್ದರು. ಅದರಂತೆ ಅಮೃತಾ ಕುಮ್ಮಕ್ಕಿನಿಂದ ಆಕೆಯ ಪ್ರಿಯಕರ ಸಿದ್ದೇಶ್​​ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

    Post Views: 148

    Related Posts

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.