Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಭರಣ ಮಳಿಗೆಯಲ್ಲಿ ₹1.66 ಕೋಟಿ ಚಿನ್ನಾಭರಣ ಕಳವು: ಸೇಲ್ಸ್ ವುಮನ್ ಪರಾರಿ
    ಇತ್ತೀಚಿನ ಸುದ್ದಿ

    ಆಭರಣ ಮಳಿಗೆಯಲ್ಲಿ ₹1.66 ಕೋಟಿ ಚಿನ್ನಾಭರಣ ಕಳವು: ಸೇಲ್ಸ್ ವುಮನ್ ಪರಾರಿ

    May 15, 2026
    Share

    ಅಹಮದಾಬಾದ್ : ಹೆಸರಾಂತ ಆಭರಣ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ 1.66 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    ಹರ್ಷಿದಾ ಶೆಟ್ಟಿ ಎಂಬಾಕೆ ಕಳ್ಳತನ ಮಾಡಿದ ಆರೋಪಿ. ಈಕೆ ಕಳೆದ 11 ತಿಂಗಳಿನಿಂದ ದರ್ಶನ್ ಭಾಯ್ ಎಂಬುವವರಿಗೆ ಸೇರಿದ ಆಭರಣದ ಶೋ ರೂಂನಲ್ಲಿ ಸೇಲ್ಸ್ ವುಮೆನ್ ಆಗಿ ಕೆಲಸ ಮಾಡುತ್ತಿದ್ದಳು. ಕಳ್ಳತನ ಮಾಡಿದ ಬಳಿಕ “ತುರ್ತು ಕೆಲಸಕ್ಕಾಗಿ ಮಾಲೀಕರೇ ನನಗೆ ರಜೆ ನೀಡಿದ್ದಾರೆ” ಎಂದು ಸಹೋದ್ಯೋಗಿಗಳಿಗೆ ಸುಳ್ಳು ಹೇಳಿ ಆಕೆ ಹೊರನಡೆದಿದ್ದಳು.

    ಸಂಜೆ ಗ್ರಾಹಕರಿಗೆ ಆಭರಣ ತೋರಿಸುವಾಗ ಚಿನ್ನದ ಬಳೆಯೊಂದು ನಾಪತ್ತೆಯಾಗಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣ ಮಾಲೀಕರಿಗೆ ವಿಷಯ ಮುಟ್ಟಿಸಿದಾಗ, ತಾವು ಹರ್ಷಿದಾಗೆ ರಜೆ ನೀಡಿಲ್ಲ ಎಂಬ ಸತ್ಯ ಹೊರಬಂದಿದೆ. ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಹರ್ಷಿದಾ ಕಪಾಟಿನಿಂದ ಚಿನ್ನಾಭರಣಗಳನ್ನು ತೆಗೆದು ತನ್ನ ಸಮವಸ್ತ್ರ ಮತ್ತು ಬ್ಯಾಗ್‌ನಲ್ಲಿ ಬಚ್ಚಿಟ್ಟುಕೊಂಡು ಹೋಗುತ್ತಿರುವುದು ಸ್ಪಷ್ಟವಾಗಿದೆ.
    ಸ್ಟಾಕ್ ಪರಿಶೀಲನೆ ನಡೆಸಿದಾಗ ಸುಮಾರು ₹1.66 ಕೋಟಿ ಮೌಲ್ಯದ ಚಿನ್ನದ ಸರಗಳು, ಉಂಗುರಗಳು, ಮಂಗಳಸೂತ್ರ, ಪೆಂಡೆಂಟ್ ಮತ್ತು ದುಬಾರಿ ಕೈಗಡಿಯಾರಗಳು ಕಾಣೆಯಾಗಿರುವುದು ದೃಢಪಟ್ಟಿದೆ. ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಪೊಲೀಸರು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

    Post Views: 194

    karnataka

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.