Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಂತಾರಾಜ್ಯ ಜಾಲದ ಶಂಕೆ: ನೀಲಣ್ಣವರ್ ಕೇಸ್ ಸಿಐಡಿ ವಶಕ್ಕೆ
    ಇತ್ತೀಚಿನ ಸುದ್ದಿ

    ಅಂತಾರಾಜ್ಯ ಜಾಲದ ಶಂಕೆ: ನೀಲಣ್ಣವರ್ ಕೇಸ್ ಸಿಐಡಿ ವಶಕ್ಕೆ

    May 17, 2026
    Share

    ಇನ್ನು ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಬೆಳಗಾವಿ ಕಮಿಷನರ್ ಕಚೇರಿಯಲ್ಲಿ ಇಂದು ಸಿಐಡಿ ಡಿಐಜಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ಸ್ಥಳೀಯ ಅಧಿಕಾರಿಗಳ ಜೊತೆ 2 ಗಂಟೆ ಕಾಲ ಸಭೆ ಮಾಡಿದರು. ನೀಲಣ್ಣವರ್ ಕೇಸ್‌ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅಧಿಕೃತವಾಗಿ ಸಿಐಡಿಗೆ ಹಸ್ತಾಂತರಿಸಿದರು. ನಿನ್ನೆವರೆಗೆ ನಡೆಸಿದ ತನಿಖಾ ವರದಿ ಸೇರಿದಂತೆ ಎಲ್ಲಾ ಮಹತ್ವದ ದಾಖಲೆಗಳನ್ನು ಹಸ್ತಾಂತರಿಸಲಾಗಿದೆ. ಪ್ರಕರಣದ ಬಗ್ಗೆ ಸುದೀರ್ಘವಾಗಿ ಮಾಹಿತಿ ಪಡೆದ ಸಿಐಡಿ ತಂಡ ಬಳಿಕ ಬೆಂಗಳೂರಿಗೆ ತೆರಳಿತು.

    ಕಮಿಷನರ್ ಭೂಷಣ್ ಬೊರಸೆ ಹೇಳಿದ್ದಿಷ್ಟು 

    ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಮಿಷನರ್ ಭೂಷಣ್ ಬೊರಸೆ, ಶಿವಂ ಅಸೋಸಿಯೇಟ್ ಮಾಲೀಕ ಶಿವಾನಂದ ನೀಲಣ್ಣವರ್ ಬಂಧನವಾಗಿದೆ. ಈ ಪ್ರಕರಣದ ವ್ಯಾಪ್ತಿ ಅಂತಾರಾಜ್ಯಕ್ಕೂ ವ್ಯಾಪಿಸಿದೆ. 50 ಕೋಟಿ ರೂಪಾಯಿಗೂ ಹೆಚ್ಚು ಅವ್ಯವಹಾರ ಆಗಿದೆ. ಈ ಕಾರಣಕ್ಕೆ ಡಿಜಿ-ಐಜಿಪಿ ಕೇಸ್ ಸಿಐಡಿಗೆ ವಹಿಸಿದ್ದಾರೆ. ಸಿಐಡಿ ಡಿಐಜಿ ಬಂದು ನಮ್ಮ ಬಳಿ ಮಾಹಿತಿ ಪಡೆದಿದ್ದಾರೆ. ನಾವು ಮಾಡಿರುವ ತನಿಖೆ ಅವರಿಗೆ ನೀಡಿದ್ದೇವೆ. ಅದರ ಆಧಾರದ ಮೇಲೆ ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಸಿಐಡಿ ಡಿಐಜಿ ಅವರು ಫಾರ್ಮಾಲಿಟಿ ಮುಗಿಸಿಕೊಂಡು ಹೋಗಿದ್ದಾರೆ. ಸ್ಥಳೀಯ ಅಧಿಕಾರಿಗಳು ಕಲೆ ಹಾಕಿರುವ ಮಾಹಿತಿಯನ್ನ ಸಂಗ್ರಹಿಸಿದ್ದಾರೆ ಎಂದು ಹೇಳಿದರು.

    Post Views: 140

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.