Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಸ್‌ಎಸ್‌ಎಲ್‌ಸಿ-ಪಿಯುಸಿ ಬಳಿಕ ಬಾಲಕಿಯರ ನಾಪತ್ತೆ ಹೆಚ್ಚಳ: ಎಸ್‌ಪಿ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಎಸ್‌ಎಸ್‌ಎಲ್‌ಸಿ-ಪಿಯುಸಿ ಬಳಿಕ ಬಾಲಕಿಯರ ನಾಪತ್ತೆ ಹೆಚ್ಚಳ: ಎಸ್‌ಪಿ ಎಚ್ಚರಿಕೆ

    May 18, 2026
    Share

    ರಾಯಚೂರು: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ.

    ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್!

    ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮನೆಯಿಂದ ಫ್ರೆಂಡ್ಸ್ ಮನೆಗೆ ಹೋಗಿ ಬರುತ್ತೇನೆ, ನೋಟ್ಸ್ ತರುತ್ತೇನೆ ಎಂದು ಪೋಷಕರಿಗೆ ಸುಳ್ಳು ಹೇಳಿ ಹೊರಡುವ ಬಾಲಕಿಯರು ವಯಸ್ಕ ಯುವಕರ ಜೊತೆ ನಾಪತ್ತೆಯಾಗುತ್ತಿದ್ದಾರೆ. ಪೋಷಕರು ಹಗಲಿರುಳು ಹುಡುಕಾಟ ನಡೆಸಿ, ಮಕ್ಕಳ ಸುಳಿವು ಸಿಗದೇ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

    ಪೋಷಕರಿಗೆ ರಾಯಚೂರು ಎಸ್ ಪಿ ಕಟ್ಟುನಿಟ್ಟಿನ ಮನವಿ

    ಈ ಗಂಭೀರ ವಿಷಯದ ಕುರಿತು ಮಾತನಾಡಿದ ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ , ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೇ 19 ಕೇಸ್​ಗಲು ದಾಖಲಾಗಿದ್ದು, 6 ಬಾಲಕಿಯರ ಸುಳಿವು ಸಿಕ್ಕಿದೆ. ಉಳಿದ 13 ಪ್ರಕರಣಗಳ ತನಿಖೆ ಮುಂದುವರೆದಿದೆ. ಶಾಲಾ-ಕಾಲೇಜು ಪರೀಕ್ಷೆ ಮುಗಿದ ಬಳಿಕ ಇಂತಹ ಘಟನೆಗಳು ಮರುಕಳಿಸುತ್ತಿವೆ. 18 ವರ್ಷದ ಒಳಗಿನ ಬಾಲಕಿಯರು ವಯಸ್ಕ ಯುವಕರ ಜೊತೆ ಹೋದರೆ ಅದನ್ನು ಅಪಹರಣವೆಂದೇ ಪರಿಗಣಿಸಲಾಗುತ್ತದೆ. ಆದ್ದರಿಂದ ಪೋಷಕರು ಹಾಗೂ ಕುಟುಂಬಸ್ಥರು ಮಕ್ಕಳ ಮನಸ್ಥಿತಿಯನ್ನು ಅರಿತು ಅವರಿಗೆ ಸೂಕ್ತ ಕೌನ್ಸೆಲಿಂಗ್ ಮಾಡಬೇಕು ಎಂದು ಕರೆ ನೀಡಿದ್ದಾರೆ.

    Post Views: 120

    karnataka PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.