Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಯುವತಿಯ ಕೊಲೆ ಯತ್ನ ಪ್ರಕರಣ- ಸ್ನೇಹಿತೆಯ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ: ಯುವತಿಯ ಕೊಲೆ ಯತ್ನ ಪ್ರಕರಣ- ಸ್ನೇಹಿತೆಯ ಬಂಧನ

    May 21, 2026
    Share

    ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದೆ ನಡೆದಿದ್ದ ಯುವತಿಯ ಕೊಲೆ ಯತ್ನ ಪ್ರಕರಣವನ್ನು ಬೇಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

    ಮಣಿಪಾಲ- ಅಲೆವೂರು ರಸ್ತೆಯ  ಶಾಂತಿನಗರ ಸಮೀಪದ ವಾಗ್ಲೆ ಸ್ಟೋರ್ ಬಳಿಯಿರುವ ಮಹಿಳಾ ಪಿಜಿಯಲ್ಲಿ ವಾಸವಿದ್ದ ಅಂಕೋಲಾ ಮೂಲದ ಯೋಗಿತಾ ಎಂಬಾಕೆಯ ಕೊಲೆ ಯತ್ನ ನಡೆದಿತ್ತು. ಪಿಜಿಯಲ್ಲಿ ಒಬ್ಬಳೇ ಮಲಗಿದ್ದ ಯೋಗಿತ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಮಾರಣಾಂತಿಕ ದಾಳಿ ನಡೆಸಲಾಗಿತ್ತು. ಅಲ್ಲದೇ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ನಾಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಮಣಿಪಾಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರ ತಂಡ ಇದೀಗ ಯುವತಿಯೊಬ್ಬಳನ್ನು ವಶಕ್ಕೆ ಪಡೆದಿದ್ದಾರೆ.

    ಯೋಗಿತಾ ವಾಸವಿದ್ದ ಪಿಜಿಯ ಇನ್ನೊಂದು ರೂಮಿನಲ್ಲಿ ವಾಸವಿದ್ದ ಯುವತಿ ಸುಷ್ಮಾ ನಾಯ್ಕ್ (30) ಬಂಧಿತ ಯುವತಿ.   ಆರೋಪಿ ಸುಷ್ಮಾ ನಾಯ್ಕ್ ಒಬ್ಬಳೇ ಈ ಕೃತ್ಯ ಎಸಗಿರುವುದಾಗಿ ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಬಂಧಿತಳಿಂದ ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದೆ.   ಯುವತಿ ಯೋಗೀತಾ ಹಾಗೂ ಸುಷ್ಮಾ ನಾಯ್ಕ್ ಅಕ್ಕಪಕ್ಕದ ರೂಮಿನವರು. ಯೋಗೀತಾ ರೂಮಿನಲ್ಲೇ ಆರೋಪಿ ಸುಷ್ಮಾ ಮೇ. 12ರಂದು ಮಲಗಿದ್ದಾಳೆ.

    ಮಧ್ಯರಾತ್ರಿವರೆಗೂ ಪೋನಿನಲ್ಲಿ ಮಾತನಾಡುತ್ತಿದ್ದ ಸುಷ್ಮಾ, ಯೋಗೀತಾ ನಿದ್ದೆಗೆ ಜಾರುವುದನ್ನೇ ಹೊಂಚು ಹಾಕಿ ಕುಳಿತಿದ್ದಾಳೆ. ಬೆಳಗ್ಗಿನ ಜಾವಾ ಯೋಗೀತಾ ಗಾಢ ನಿದ್ದೆಗೆ ಜಾರಿರುವುದನ್ನು ಖಾತ್ರಿಪಡಿಸಿಕೊಂಡ ಆರೋಪಿ ಸುಷ್ಮಾ ಮೊದಲೇ ರೂಮಿನ ಹೊರಗಡೆ ತಂದಿಟ್ಟಿದ್ದ ಸಿಮೆಂಟ್ ಇಟ್ಟಿಗೆಯನ್ನು ಎತ್ತಿ ಹಾಕಿದ್ದಾಳೆ. ಬಳಿಕ ಯೋಗೀತಾಳ ಕಿವಿಯೋಲೆ ಹಾಗೂ ಚಿನ್ನದ ಸರವನ್ನು ಕಸಿದು ತನ್ನ ರೂಮಿಗೆ ತೆರಳಿ ಮಲಗಿದ್ದಳು. ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದ  ಸ್ನೇಹಿತೆಯರು ಬಂದಾಗ ರಕ್ತದ ಮಡುವಿನಲ್ಲಿದ್ದ ಯೋಗಿತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ಯೋಗೀತಾಳಿಗೆ ಚಿಕಿತ್ಸೆ ಮುಂದುವರಿದಿದೆ.

    ತನಿಖೆ ಕೈಗೆತ್ತಿಕೊಂಡಿದ್ದ ಮಣಿಪಾಲ ಠಾಣಾ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ ವಿವಿಧ ಆಯಾಮಗಳಿಗೆ ತನಿಖೆ ನಡೆಸಿ ಪ್ರಕರಣವನ್ನು ಬೇಧಿಸಿದ್ದಾರೆ. ಆರೋಪಿ ಸುಷ್ಮಾ, ಹಲವು ದಿನಗಳಿಂದ ಕೊಲೆಗೆ ಸ್ಕೆಚ್ ಹಾಕಿದ್ದಳು. ಅಲ್ಲದೇ ಆನ್ಲೈನ್ ನಲ್ಲಿ ಚಾಕು ಕೂಡ ತರಿಸಿದ್ದಳು.

    ಯೋಗೀತಾ ಒಬ್ಬಳೇ ಇರುವುದಕ್ಕಾಗಿ ಸಂಚು ರೂಪಿಸಿ ಕೊಲೆಗೆ ಯತ್ನಿಸಿದ್ದಾಳೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.  ಮಣಿಪಾಲ ಪೋಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ತಿಮ್ಮೇಶ್ ಬಿ ಎನ್, ಪಿಎಸ್ ಐ ಶಂಭುಲಿಂಗಯ್ಯ ಹಾಗೂ ಠಾಣಾ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರಾದ ವಿವೇಕ್, ಚೇತನ್, ಅಜ್ಜಲ್, ರವಿರಾಜ್, ಮಂಜುನಾಥ್, ಉಡುಪಿ ನಗರ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರಾದ ಜೀವನ್, ಪ್ರಸನ್ನ, ಮಲ್ಲಯ್ಯ ಹೇಮಂತ್ ಹಾಗೂ ಜಿಲ್ಲಾ ಪೊಲೀಸ್ ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ದಿನೇಶ್ ಮತ್ತು ನಿತಿನ್ ರವರ ನೆರವಿನೊಂದಿಗೆ ಕಾರ್ಯಾಚರಣೆ ನಡೆದಿದೆ . ಆರೋಪಿ ಸುಷ್ಮಾ ನಾಯ್ಕ್ ಉತ್ತರ ಕನ್ನಡ ಜಿಲ್ಲೆಯವಳಾಗಿದ್ದು, ಮಣಿಪಾಲದಲ್ಲಿ ಖಾಸಗಿ ಸಂಸ್ಥೆಯಲ್ಲಿ ಕೆಲಸಕ್ಕಾಗಿ ಬಂದಿದ್ದಳು. ಹಣದ ವ್ಯವಹಾರದಲ್ಲಿ ತೊಡಗಿ ಆರ್ಥಿಕ ಮುಗ್ಗಟ್ಟು ಅನುಭವಿಸುತ್ತಿದ್ದಳು. ಹೀಗಾಗಿ ಚಿನ್ನದ ಸರಕ್ಕಾಗಿಯೇ ಕೊಲೆಗೆ ಯತ್ನಿಸಿದ್ದಾಳೆ ಎನ್ನುವುದು ತನಿಖೆಯಿಂದ ಬಯಲಾಗಿದೆ. ಪೊಲೀಸರು ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ

    Post Views: 113

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.