Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೋಟೆಲ್‌ಗೆ ಬೆಂಕಿ ಬಿದ್ದು ದುರಂತ: ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಅತಿಥಿಗಳು
    ಇತ್ತೀಚಿನ ಸುದ್ದಿ

    ಹೋಟೆಲ್‌ಗೆ ಬೆಂಕಿ ಬಿದ್ದು ದುರಂತ: ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಅತಿಥಿಗಳು

    June 3, 2026
    Share

    ನವದೆಹಲಿ: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಹೋಟೆಲೊಂದರಲ್ಲಿ ಬುಧವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ವಿದೇಶಿಯರು ಸೇರಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.ಘಟನೆ ವೇಳೆ ಪ್ರಾಣ ಉಳಿಸಿಕೊಳ್ಳಲು ಕೆಲವರು ಕಟ್ಟಡದಿಂದ ಕೆಳಗೆ ಹಾರಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ 8.50 ರ ಸುಮಾರಿಗೆ ಹೋಟೆಲ್‌ನ ನೆಲಮಾಳಿಗೆಯಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಕೆಲವೇ ನಿಮಿಷಗಳಲ್ಲಿ ಎರಡು ವಾಟರ್ ಎಂಜಿನ್‌ಗಳು, ಎರಡು ಬೌಸರ್‌ಗಳು ಮತ್ತು ಒಂದು ತ್ವರಿತ ಪ್ರತಿಕ್ರಿಯೆ ವಾಹನ ಸೇರಿದಂತೆ ಆಧುನಿಕ ರಕ್ಷಣಾ ಘಟಕಗಳು ಸ್ಥಳಕ್ಕೆ ಧಾವಿಸಿದವು. ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.ಐದು ಅಂತಸ್ತಿನ ಈ ಹೋಟೆಲ್‌ನಲ್ಲಿ ಸುಮಾರು 25 ಕೊಠಡಿಗಳಿದ್ದು, ಅವಘಡದ ಸಮಯದಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಹೋಟೆಲ್‌ನಲ್ಲಿದ್ದರು ಎಂದು ಅಂದಾಜಿಸಲಾಗಿದೆ. ಇವರಲ್ಲಿ ಹೆಚ್ಚಿನವರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದರು ಎಂದು ಹೇಳಲಾಗಿದೆ.ಅಗ್ನಿಶಾಮಕ ದಳದೊಂದಿಗೆ ಸ್ಥಳೀಯ ನಿವಾಸಿಗಳು ಮತ್ತು ಹೋಟೆಲ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದ್ದು, ಹೋಟೆಲ್‌ನಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಿಸುವಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು ಪ್ರಧಾನಿ ನರೇಂದ್ರ ಮೋದಿ ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ‘ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿರುವುದು ದುರಂತದ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಮತ್ತು ಚಿಕಿತ್ಸೆಯನ್ನು ಒದಗಿಸಲು ಅಧಿಕಾರಿಗಳು ಸ್ಥಳದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಪಿಎಂ ಕಚೇರಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

    Post Views: 113

    PoliceInvestigation

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.