Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಪ್ರಚಾರದ ಕೋಪಕ್ಕೆ ಬಿತ್ತು ಹೆಣ- ಜೋಕಟ್ಟೆಯಲ್ಲಿ ಭೀಕರ ಕೊಲೆ ಪ್ರಕರಣ ಬಯಲು
    ಇತ್ತೀಚಿನ ಸುದ್ದಿ

    ಅಪಪ್ರಚಾರದ ಕೋಪಕ್ಕೆ ಬಿತ್ತು ಹೆಣ- ಜೋಕಟ್ಟೆಯಲ್ಲಿ ಭೀಕರ ಕೊಲೆ ಪ್ರಕರಣ ಬಯಲು

    June 14, 2026
    Share

    ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರವನ್ನು ಪಣಂಬೂರು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್‌ 10 ರಂದು ಬೆಳಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್‌ಇಝಡ್‌ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ತನಿಖೆಯ ವೇಳೆ ಮೃತನನ್ನು ಚಂದನ್‌ ಚೌಹಾನ್‌ (36) ಬಿಹಾರ ಮೂಲದ ನಿವಾಸಿ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಪ್ರಶಾಂತ್ ಕುಮಾರ್ ರನ್ನು ಜೂನ್‌13 ರಂದು ಬೆಳಗಿನ ಜಾವ 1.30 ಗಂಟೆಗೆ ಗೋವಾ ರಾಜ್ಯದ ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇನ್ನೊಬ್ಬ ಆರೋಪಿ ಪಿಂಕೂ ಮಹ್ತೋ ನನ್ನು ವಿಜಯ ವಿಠಲ ಭಜನಾ ಮಂದಿರದ ಬಳಿಯ ಜೋಕಟ್ಟೆ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.ಆರೋಪಿತ ಪ್ರಶಾಂತ್ ಕುಮಾರ್‌ನ ಪತ್ನಿಯು ಕಳೆದ ಎಪ್ರಿಲ್ ತಿಂಗಳಿನಲ್ಲಿ ಇನ್ನೋರ್ವ ಯುವಕನ ಜೊತೆಯಲ್ಲಿ ಮನೆ ಬಿಟ್ಟು ಹೋಗಿದ್ದು, ಆಕೆ ಮನೆ ಬಿಟ್ಟು ಹೋಗಲು ಪ್ರಕರಣದಲ್ಲಿ ಕೊಲೆಯಾದ ಚಂದನ್ ಚೌಹಾನ್ ಸಹಾಯ ಮಾಡಿದ್ದಾನೆ ಎಂಬ ಅನುಮಾನ ಪ್ರಶಾಂತ್ ಕುಮಾರ್ ಇತ್ತು. ಚಂದನ್ ಅಲ್ಲಿ ಇಲ್ಲಿ ಆರೋಪಿ ಪ್ರಶಾಂತನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾನೆ ಎಂಬ ಕಾರಣಕ್ಕೆ ಇಬ್ಬರು ಆರೋಪಿಗಳು ಆಕ್ರೋಶಗೊಂಡಿದ್ದರು ಎನ್ನಲಾಗಿದೆ.ಜೂನ್‌ 09 ರಂದು ಸಂಜೆ 6 ಗಂಟೆ ವೇಳೆ ಆರೋಪಿಗಳಿಬ್ಬರು ಚಂದನ್ ನ ತಲೆ, ಮುಖಕ್ಕೆ ಬಲವಾದ ದೊಣ್ಣೆಯಿಂದ ಹೊಡೆದು ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಕೊಲೆ ಮಾಡಿ ಮೃತದೇಹವನ್ನು ತನ್ನ ಜೋಕಟ್ಟೆ ಬಾಡಿಗೆ ಮನೆಯ ಪಕ್ಕದಲ್ಲಿರುವ ತೋಡಿನಲ್ಲಿ ಬಿಸಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಈ ಪ್ರಕರಣವನ್ನು ಅತೀ ಶೀಘ್ರದಲ್ಲಿ ಭೇಧಿಸುವಲ್ಲಿ ಪಣಂಬೂರು ಪೊಲೀಸರು ಸಫಲರಾಗಿದ್ದು ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ.ಕೆ.ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ರವರು ಪ್ರಕರಣವನ್ನು ಭೇಧಿಸಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ಉಪ ನಿರೀಕ್ಷಕರುಗಳಾದ ಶ್ರೀಕಲಾ ಕೆ.ಟಿ ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಸುರೇಂದ್ರ, ಚೆರಿಯನ್, ದೀಪಕ್, ಫಕ್ಕಿರೇಶ್, ರಾಕೇಶ್,ಮಂಜುನಾಥ್ ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

    Post Views: 7

    karnataka PoliceInvestigation

    Related Posts

    ರೈಲು ಹಳಿಯಲ್ಲಿ ದುರಂತ ಅಂತ್ಯ: ತಮಿಳುನಾಡು ಮೂಲದ ವ್ಯಕ್ತಿ ಸಾವು

    June 14, 2026

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರೈಲು ಹಳಿಯಲ್ಲಿ ದುರಂತ ಅಂತ್ಯ: ತಮಿಳುನಾಡು ಮೂಲದ ವ್ಯಕ್ತಿ ಸಾವು

    June 14, 2026

    ಅಪಪ್ರಚಾರದ ಕೋಪಕ್ಕೆ ಬಿತ್ತು ಹೆಣ- ಜೋಕಟ್ಟೆಯಲ್ಲಿ ಭೀಕರ ಕೊಲೆ ಪ್ರಕರಣ ಬಯಲು

    June 14, 2026

    ಕಾಂಗ್ರೆಸ್ ಸೇರ್ಪಡೆ ಸುದ್ದಿ ಆಧಾರರಹಿತ: ಪ್ರಮೋದ್ ಮಧ್ವರಾಜ್ ಸ್ಪಷ್ಟನೆ

    June 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.