Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    Share

    ಮಂಗಳೂರು: ರೈಲ್ವೆ ಕ್ರಾಸಿಂಗ್ ಗೇಟ್‌ಗಳಲ್ಲಿ ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗವು ಕಠಿಣ ಕ್ರಮ ಕೈಗೊಂಡಿದೆ.ರಸ್ತೆ ಬಳಕೆದಾರರ ನಿರ್ಲಕ್ಷ್ಯದಿಂದಾಗಿ ರೈಲ್ವೆ ಕ್ರಾಸಿಂಗ್‌ಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. 2025 ಮತ್ತು 2026ನೇ ಸಾಲಿನಲ್ಲಿ ಒಟ್ಟು 79 ರೈಲ್ವೆ ಗೇಟ್ ಅಪಘಾತಗಳು ವರದಿಯಾಗಿವೆ (2025ರಲ್ಲಿ 55 ಪ್ರಕರಣಗಳು ಮತ್ತು 2026ರಲ್ಲಿ 24 ಪ್ರಕರಣಗಳು) ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ಎಚ್ಚರಿಕೆ ಸಂಕೇತಗಳಿದ್ದರೂ ಅಥವಾ ಗೇಟ್‌ಗಳನ್ನು ಮುಚ್ಚಿದ್ದರೂ ವಾಹನ ಸವಾರರು ರೈಲ್ವೆ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿರುವುದು ಹೆಚ್ಚಿನ ಅಪಘಾತಗಳು ಸಂಭವಿಸಲು ಮುಖ್ಯ ಕಾರಣವಾಗಿದೆ. ಇಂತಹ ಬೇಜವಾಬ್ದಾರಿಯುತ ನಡವಳಿಕೆಯು ರಸ್ತೆ ಬಳಕೆದಾರರ ಜೀವಕ್ಕೆ ಅಪಾಯವನ್ನುಂಟು ಮಾಡುವುದಲ್ಲದೆ, ರೈಲ್ವೆ ಕಾರ್ಯಾಚರಣೆಯ ಸುರಕ್ಷತೆಗೂ ಗಂಭೀರ ಬೆದರಿಕೆಯೊಡ್ಡುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ಪದೇ ಪದೇ ನಡೆಯುತ್ತಿರುವ ಈ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಂಬಂಧಪಟ್ಟ ಅಧಿಕಾರಿಗಳು, ಆರು ಮಂದಿ ವಾಹನ ಚಾಲಕರ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಅವಧಿಗೆ ಅಮಾನತುಗೊಳಿಸಿದ್ದಾರೆ. ಇನ್ನೂ ಹಲವು ಪ್ರಕರಣಗಳು ವಿಚಾರಣೆ ಮತ್ತು ಶಿಸ್ತುಕ್ರಮದ ಹಂತದಲ್ಲಿವೆ.2025-26ನೇ ಆರ್ಥಿಕ ವರ್ಷದಲ್ಲಿ, ರೈಲ್ವೆ ಗೇಟ್‌ಗಳಿಗೆ ಡಿಕ್ಕಿ ಹೊಡೆದು ರೈಲ್ವೆ ಆಸ್ತಿಗೆ ಹಾನಿ ಮಾಡಿದ ಅಪರಾಧಿಗಳಿಂದ ಒಟ್ಟು 17,27,659 ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಪಾಲಕ್ಕಾಡ್ ವಿಭಾಗವು ತಿಳಿಸಿದೆ.ಅಲ್ಲದೆ, ಇಂತಹ ಘಟನೆಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Post Views: 15

    karnataka PoliceInvestigation

    Related Posts

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.