Facebook Twitter Instagram
    Thursday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವರದಕ್ಷಿಣೆ ಕಿರುಕುಳದ ಆರೋಪ; ಆತ್ಮಹತ್ಯೆಗೂ ಮುನ್ನ ಮಹಿಳೆಗೆ ನಡೆದಿತ್ತು ಭೀಕರ ಹಲ್ಲೆ
    ಇತ್ತೀಚಿನ ಸುದ್ದಿ

    ವರದಕ್ಷಿಣೆ ಕಿರುಕುಳದ ಆರೋಪ; ಆತ್ಮಹತ್ಯೆಗೂ ಮುನ್ನ ಮಹಿಳೆಗೆ ನಡೆದಿತ್ತು ಭೀಕರ ಹಲ್ಲೆ

    June 18, 2026
    Share

    ಥಾಣೆ (ಮುಂಬೈ): ವಿವಾಹವಾದ ಕೇವಲ ನಲವತ್ತೆಂಟು ದಿನಗಳಲ್ಲಿ, ಅತ್ತೆ-ಮಾವ ಹಾಗೂ ವೈದ್ಯ ಪತಿಯ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಸಮೀಪದ ಥಾಣೆಯ ಅಂಬರ್ನಾಥ್‌ನಲ್ಲಿ ನಡೆದಿದೆ. ವಿಶಾಖಾ ತಿಲ್ಕರ್ (26) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಮೃತಳ ಪತಿ, ವೈದ್ಯ ನಿತಿನ್ ತಿಲ್ಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ.ಕಳೆದ ಏಪ್ರಿಲ್ 30 ರಂದು ವಿಶಾಖಾ ಮತ್ತು ನಿತಿನ್ ತಿಲ್ಕರ್ ಅವರ ವಿವಾಹ ನಡೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ವರದಕ್ಷಿಣೆಗಾಗಿ ಅತ್ತೆ-ಮಾವಂದಿರು ಕಿರುಕುಳ ನೀಡಲು ಆರಂಭಿಸಿದ್ದರು. ಪತಿ ನಿತಿನ್ ತಿಲ್ಕರ್ ಅಂಬರ್ನಾಥ್‌ನಲ್ಲಿರುವ ತನ್ನ ಮನೆಯ ಒಳಗೆ ಮತ್ತು ಹೊರಗೆ ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಅಳವಡಿಸಿ, ಪತ್ನಿಯ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡುತ್ತಿದ್ದನು. ಆಕೆಯ ಗೌಪ್ಯತೆಯ ಸಂಪೂರ್ಣ ಹಕ್ಕನ್ನು ಕಸಿದುಕೊಂಡು, ಡಿಜಿಟಲ್ ಜೈಲಿನಲ್ಲಿ ಇಟ್ಟಂತೆ ನಡೆಸಿಕೊಳ್ಳುತ್ತಿದ್ದನು ಎಂದು ವಿಶಾಖಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.ವಿವಾಹದ ಸಮಯದಲ್ಲಿ ಹೆಣ್ಣಿನ ಕಡೆಯವರಿಂದ ಆಭರಣ ಹಾಗೂ ಹಣ ಕಡಿಮೆ ಬಂದಿದೆ ಎಂಬ ಕಾರಣಕ್ಕೆ ಅತ್ತೆ ಛಾಯಾ ಮತ್ತು ಮೈದುನ ನಿನಾದ್ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದರು. ವಿಶಾಖಾ ಯಾರೊಂದಿಗಾದರೂ ಮಾತನಾಡಿದರೆ ಪತಿ ಆಕೆಯನ್ನು ಕ್ರೂರವಾಗಿ ಥಳಿಸುತ್ತಿದ್ದನು. ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನಗಳ ಮೊದಲು, ಕೇವಲ ನೆರೆಮನೆಯ ಮಹಿಳೆಯೊಂದಿಗೆ ಮಾತನಾಡಿದ ಏಕೈಕ ಕಾರಣಕ್ಕೆ ವಿಶಾಖಾಳನ್ನು ಅತಿ ಅಮಾನುಷವಾಗಿ ಥಳಿಸಲಾಗಿತ್ತು.

    Post Views: 2

    CrimeNews PoliceInvestigation

    Related Posts

    ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು

    June 18, 2026

    ವಾಹನ ದೋಷ ಪರಿಶೀಲನೆ ವೇಳೆ ಭೀಕರ ಘಟನೆ; ತನ್ನದೇ ಟಿಪ್ಪರ್ ಹರಿದು ಚಾಲಕ ಬಲಿ

    June 18, 2026

    ಬಂಟ್ವಾಳ: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲಕಿ ಸಾವು..!!

    June 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವರದಕ್ಷಿಣೆ ಕಿರುಕುಳದ ಆರೋಪ; ಆತ್ಮಹತ್ಯೆಗೂ ಮುನ್ನ ಮಹಿಳೆಗೆ ನಡೆದಿತ್ತು ಭೀಕರ ಹಲ್ಲೆ

    June 18, 2026

    ಮಕ್ಕಳು ಆಟವಾಡುವಾಗ ಕುಸಿದುಬಿದ್ದ ಗೇಟ್; 5 ವರ್ಷದ ಮಗು ಸಾವು

    June 18, 2026

    ವಾಹನ ದೋಷ ಪರಿಶೀಲನೆ ವೇಳೆ ಭೀಕರ ಘಟನೆ; ತನ್ನದೇ ಟಿಪ್ಪರ್ ಹರಿದು ಚಾಲಕ ಬಲಿ

    June 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.