Facebook Twitter Instagram
    Tuesday, July 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

    July 14, 2026
    Share

    ಮಂಗಳೂರು: ನಗರದ ವಿವಿಧ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರನ್ನು ವಶಕ್ಕೆ ಪಡೆದ ಬೆನ್ನಲ್ಲೇ, ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇವರನ್ನು ಕರೆತಂದಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ದಲ್ಲಾಳಿಗಳ ವಿರುದ್ಧ ಮಾನವ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದಾರೆ.

    ಅಂತರರಾಜ್ಯ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ಇಲ್ಲಿನ ಸ್ಥಳೀಯ ಕೆಲಸಗಳಿಗೆ ಅಕ್ರಮವಾಗಿ ಸೇರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

    ಪಶ್ಚಿಮ ಬಂಗಾಳ ಮೂಲದ ಮೊಯ್ದಿನ್ ಇಸ್ಲಾಂ, ರಸುಲ್ ಇಸ್ಲಾಂ ಮತ್ತು ದಿಲ್ವರ್ ಹುಸೇನ್ ಪ್ರಕರಣದ ಆರೋಪಿಗಳಾಗಿದ್ದಾರೆ.
    ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, “ಆರೋಪಿಗಳ ಪೈಕಿ ಮೊಯ್ದಿನ್ ಇಸ್ಲಾಂ ಮತ್ತು ದಿಲ್ವರ್ ಹುಸೇನ್ ಎಂಬಿಬ್ಬರನ್ನು ಮಂಗಳೂರು ನಗರ ವ್ಯಾಪ್ತಿಯಲ್ಲೇ ಬಂಧಿಸಲಾಗಿದೆ,” ಎಂದು ತಿಳಿಸಿದ್ದಾರೆ.

    ಪ್ರಕರಣದ ಮೂರನೇ ಆರೋಪಿಗಾಗಿ ತನಿಖೆ ತೀವ್ರಗೊಳಿಸಿದ್ದ ಪೊಲೀಸರು ಹೊರರಾಜ್ಯಕ್ಕೂ ಜಾಲ ಬೀಸಿದ್ದರು. ಪೊಲೀಸರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ನಡೆಸಿದ ಜಂಟಿ ಕಾರ್ಯಾಚರಣೆಯ ಫಲವಾಗಿ, ಮೂರನೇ ಆರೋಪಿಯನ್ನು ಕೋಲ್ಕತ್ತಾದಲ್ಲಿ ವಶಕ್ಕೆ ಪಡೆಯಲಾಗಿದೆ. ಆತನನ್ನು ಮಂಗಳೂರಿಗೆ ಕರೆತರಲು ನಮ್ಮ ವಿಶೇಷ ಪೊಲೀಸ್ ತಂಡ ಈಗಾಗಲೇ ಕೋಲ್ಕತ್ತಾಗೆ ತೆರಳಿದೆ,” ಎಂದು ಪೊಲೀಸ್ ಆಯುಕ್ತರು ವಿವರಿಸಿದ್ದಾರೆ.

    ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಒಟ್ಟುಗೂಡಿಸಿ ಮಂಗಳೂರಿನ ನಿರ್ಮಾಣ ವಲಯದ ಅಗತ್ಯಗಳಿಗೆ ತಕ್ಕಂತೆ ಸರಬರಾಜು ಮಾಡುವ ಜಾಲ ಹೊಂದಿದ್ದರು. ದೇಶದ ಒಳಗಿನ ವಲಸೆ ಕಾರ್ಮಿಕರನ್ನು ಕರೆತರುವ ನೆಪದಲ್ಲಿ, ಇವರು ಬಾಂಗ್ಲಾದೇಶದ ಗಡಿ ಭಾಗದಿಂದ (ವಿಶೇಷವಾಗಿ ಮುರ್ಷಿದಾಬಾದ್ ಮೂಲಕ) ಅಕ್ರಮವಾಗಿ ಜನರನ್ನು ಭಾರತದೊಳಗೆ ನುಸುಳಿಸಿ, ಮಂಗಳೂರಿನ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕೆಲಸಕ್ಕೆ ನಿಯೋಜಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

    “ಕೋಲ್ಕತ್ತಾದಲ್ಲಿ ಬಂಧಿತನಾಗಿರುವ ಮೂರನೇ ಆರೋಪಿಯನ್ನು ಮಂಗಳೂರಿಗೆ ಕರೆತಂದು ತೀವ್ರ ವಿಚಾರಣೆಗೆ ಒಳಪಡಿಸಿದ ಬಳಿಕ, ಈ ಕಳ್ಳಸಾಗಣೆ ಜಾಲದ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಇದರಲ್ಲಿ ಬೇರೆ ಯಾವುದೇ ದಲ್ಲಾಳಿಗಳು ಅಥವಾ ಸ್ಥಳೀಯರ ಕೈವಾಡವಿದೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ,” ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    Post Views: 1

    Related Posts

    ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

    July 14, 2026

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026

    ಮಂಗಳೂರು: ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ

    July 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಬಾಂಗ್ಲಾ ವಲಸಿಗರ ಪತ್ತೆ ಪ್ರಕರಣ: ಮೂವರು ದಲ್ಲಾಳಿಗಳ ವಿರುದ್ಧ ಕೇಸ್..!!

    July 14, 2026

    ಉಡುಪಿ: ಹೆದ್ದಾರಿಯಲ್ಲಿ ಯುವಕನ ವಿಚಿತ್ರ ವರ್ತನೆ- ಪೊಲೀಸರ ಮೇಲೆ ಕತ್ತಿ ಬೀಸಿದ ಯುವಕ ಅರೆಸ್ಟ್

    July 14, 2026

    ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವವಾಗಿ ಪತ್ತೆ!!

    July 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.