Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    Share


    ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಗದು, ಐಫೋನ್, ಪಾಸ್‌ಪೋರ್ಟ್ ಹಾಗೂ ಚಿನ್ನದ ಉಂಗುರವನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಮಯಪ್ರಜ್ಞೆಯಿಂದ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸಿದೆ.

    ಜುಲೈ 26 ರಂದು ಬೆಳಿಗ್ಗೆ ಸುಮಾರು 6:15 ರ ಸುಮಾರಿಗೆ ವಿಮಾನ ನಿಲ್ದಾಣದ ಕೆಳ ಅಂತಸ್ತಿನ ಪಾರ್ಕಿಂಗ್ ಪ್ರದೇಶದಲ್ಲಿದ್ದ ಲಗೇಜ್ ಟ್ರಾಲಿಯೊಂದರ ಮೇಲೆ ಕಪ್ಪು ಬಣ್ಣದ ಸಣ್ಣ ಪರ್ಸ್‌ ಅನ್ನು ಸೆಕ್ಯುರಿಟಿ ಸಿಬ್ಬಂದಿ ವಿಠಲ್ ಹೊಸಮನಿ ಗಮನಿಸಿದ್ದಾರೆ. ತಕ್ಷಣವೇ ಅವರು ಸಿಐಎಸ್‌ಎಫ್ ಪಡೆಯ ಕ್ಯೂಆರ್‌ಟಿ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BDDS) ಹಾಗೂ ಶ್ವಾನ ದಳ ತಪಾಸಣೆ ನಡೆಸಿ, ಅಪಾಯಕಾರಿ ವಸ್ತುಗಳಿಲ್ಲ ಎಂದು ಖಚಿತಪಡಿಸಿಕೊಂಡವು.

    ಪರ್ಸ್‌ ತೆರೆದು ಪರಿಶೀಲಿಸಿದಾಗ ಅದರಲ್ಲಿ ನಿಶಾಲ್ ಶಹೀಕ್ ಹೆಸರಿನ ಪಾಸ್‌ಪೋರ್ಟ್, ಐಫೋನ್, ಒಂದು ಚಿನ್ನದ ಉಂಗುರ, 10,000 ಅಮೆರಿಕನ್ ಡಾಲರ್ (ಸುಮಾರು ₹9,00,000), 500 ಯುಎಇ ದಿರ್ಹಮ್ಸ್ (ಸುಮಾರು ₹11,000), ಬೋರ್ಡಿಂಗ್ ಪಾಸ್ ಹಾಗೂ ಬ್ಯಾಂಕ್ ಕಾರ್ಡ್‌ಗಳು ಕಂಡುಬಂದಿವೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಬೋರ್ಡಿಂಗ್ ಪಾಸ್ ಆಧಾರದ ಮೇಲೆ, ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX 814) ವಿಮಾನದಲ್ಲಿ ಆಗಮಿಸಿದ್ದ ನಿಶಾಲ್ ಶಹೀಕ್ ಅವರ ಮೊಬೈಲ್ ಸಂಖ್ಯೆಯನ್ನು ಏರ್‌ಲೈನ್ಸ್ ಮುಖಾಂತರ ಪಡೆದು ಸಂಪರ್ಕಿಸಲಾಯಿತು. ಬಳಿಕ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದ ಪ್ರಯಾಣಿಕನ ದಾಖಲೆಗಳನ್ನು ಪರಿಶೀಲಿಸಿ, ನಿಯಮಾವಳಿಗಳಂತೆ ಎಲ್ಲಾ ವಸ್ತುಗಳನ್ನು ಹಸ್ತಾಂತರಿಸಲಾಗಿದೆ.

    Post Views: 7

    dakshina kannada mangalore PoliceInvestigation

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.