Facebook Twitter Instagram
    Thursday, July 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ

    July 30, 2026
    Share

    ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ (SIT) ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ವ್ಯಕ್ತಿಗಳ ಗುರುತನ್ನು ಎಫ್‌ಎಸ್‌ಎಲ್ (FSL) ಪ್ರಯೋಗಾಲಯವು ಡಿಎನ್‌ಎ ಪರೀಕ್ಷೆಯ ಮೂಲಕ ಅಧಿಕೃತವಾಗಿ ದೃಢಪಡಿಸಿದೆ. ಸೌಜನ್ಯಳ ಮಾವ ವಿಠಲ ಗೌಡ ಅವರು ತೋರಿಸಿದ ಜಾಗದಲ್ಲಿ 2025ರ ಸೆಪ್ಟೆಂಬರ್ 17 ಮತ್ತು 18ರಂದು ಎಸ್‌ಐಟಿ ಕಾರ್ಯಾಚರಣೆ ನಡೆಸಿ ಒಟ್ಟು ಏಳು ಅಸ್ಥಿಪಂಜರಗಳನ್ನು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿತ್ತು.

    ಕಾರ್ಯಾಚರಣೆ ವೇಳೆ ಅಸ್ಥಿಪಂಜರಗಳು ದೊರೆತ ಸ್ಥಳದಲ್ಲೇ ಕೆಲವೊಂದು ಐಡಿ ಕಾರ್ಡ್‌ಗಳು ಕೂಡ ಲಭ್ಯವಾಗಿದ್ದವು. ಈ ಗುರುತಿನ ಚೀಟಿಗಳ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ನಾಪತ್ತೆಯಾದವರ ಕುಟುಂಬಸ್ಥರನ್ನು ಪತ್ತೆ ಹಚ್ಚಿದ್ದರು. ಬಳಿಕ ಬೆಳ್ತಂಗಡಿ ನ್ಯಾಯಾಲಯದ ನಿರ್ದೇಶನದಂತೆ ಸಂಬಂಧಿಕರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿತ್ತು. ಇದೀಗ ಬಂದಿರುವ ವರದಿಯಲ್ಲಿ ಮೂರು ಕುಟುಂಬಗಳ ಡಿಎನ್‌ಎ ಮಾದರಿಯು ಪತ್ತೆಯಾದ ಅಸ್ಥಿಪಂಜರಗಳಿಗೆ ನಿಖರವಾಗಿ ತಾಳೆಯಾಗಿದೆ.

    ಡಿಎನ್‌ಎ ವರದಿಯ ಪ್ರಕಾರ ಪತ್ತೆಯಾದ ಮೂವರ ಗುರುತು ಹೀಗಿದೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ ನಾರಾಯಣ (27), ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿಯ ಕೃಷ್ಣಪ್ಪ (85). ಈ ಮೂವರ ಅಸ್ಥಿಪಂಜರಗಳು ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿರುವುದು ಈಗ ಪೂರ್ಣವಾಗಿ ದೃಢಪಟ್ಟಂತಾಗಿದೆ.

    ನಾಪತ್ತೆಯಾದ ಹಿನ್ನೆಲೆಯನ್ನು ಪರಿಶೀಲಿಸಿದಾಗ, ಕೊಡಗಿನ ಯು.ಬಿ. ಅಯ್ಯಪ್ಪ ಅವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇನ್ನು ತುಮಕೂರಿನ ಆದಿಶೇಷ ನಾರಾಯಣ ಎಂಬ ಯುವಕ ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದು, 2013ರ ಅಕ್ಟೋಬರ್ 2ರಂದು ಮನೆಗೆ ಬಂದು ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ. ಆತ ಆಗಾಗ ಮನೆಯಿಂದ ಹೋಗಿ ಬರುವ ಅಭ್ಯಾಸ ಹೊಂದಿದ್ದರಿಂದ ಕುಟುಂಬದವರು ದೂರು ನೀಡಿರಲಿಲ್ಲ.

    Post Views: 1

    Related Posts

    ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ

    July 30, 2026

    ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಮತ್ತು ಸುಮಾರು 30 ಜನರ ವಿರುದ್ಧ ಪ್ರಕರಣ ದಾಖಲು..!

    July 30, 2026

    ಬಂಟ್ವಾಳ: ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆಗೈದು, ಚಿನ್ನಾಭರಣ ದೋಚಿ, ಸಾಕ್ಷ್ಯನಾಶ ಪಡಿಸಿದ ಪ್ರಕರಣ- ಮೂವರಿಗೆ ಜೀವಾವಧಿ ಶಿಕ್ಷೆ

    July 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂವರ ಗುರುತು DNA ಪರೀಕ್ಷೆಯಿಂದ ದೃಢ

    July 30, 2026

    ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಹೆಸರು ಕೈಬಿಡಲು ನಿರ್ಧಾರ: ಚುನಾವಣಾ ಆಯೋಗದ ಮಹತ್ವದ ಮಾಹಿತಿ

    July 30, 2026

    ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಮತ್ತು ಸುಮಾರು 30 ಜನರ ವಿರುದ್ಧ ಪ್ರಕರಣ ದಾಖಲು..!

    July 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.