Facebook Twitter Instagram
    Thursday, August 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ (ಆ.7) ರಂದು ರಾಜ್ಯಾದ್ಯಂತ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಬಿಡುಗಡೆ
    ಇತ್ತೀಚಿನ ಸುದ್ದಿ

    ನಾಳೆ (ಆ.7) ರಂದು ರಾಜ್ಯಾದ್ಯಂತ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಬಿಡುಗಡೆ

    August 6, 2026
    Share

    ಸಂದೀಪ್ ಬೆದ್ರ ನಿರ್ದೇಶನದ ಗೋಲ್ಡನ್ ಮೂವೀಸ್ ಬ್ಯಾನರ್‌ನ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರ ತಂಡವು ಈ ಕುರಿತು ಮಾಹಿತಿಯನ್ನು ನೀಡಿದೆ.

    ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ತುಳು ಭಾಷೆ ಹಾಗೂ ಕರಾವಳಿಯ ಸಂಸ್ಕೃತಿಯ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಿಸಿದ್ದು, ಹೊಸ ಪ್ರತಿಭೆಗಳ ಜೊತೆಗೆ ಹಿರಿಯ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಒಂದು ಗೂಡಿಸಿರುವುದು ಚಿತ್ರದ ವಿಶೇಷತೆಯಾಗಿದೆ ಎಂದು ಹೇಳಿದರು. ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಮಾತನಾಡಿ ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪುತ್ತೂರು ಮತ್ತು ಉಡುಪಿಯಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತುಳು ಚಿತ್ರರಂಗದ ಹಿರಿಯ ಕಲಾವಿದರು ಮತ್ತು ತಾಂತ್ರಿಕ ತಂಡದ ಸಹಕಾರದಿಂದ ಉತ್ತಮ ಗುಣ ಮಟ್ಟದಲ್ಲಿ ಚಿತ್ರವನ್ನು ನಿರ್ಮಿಸಲಾಗಿದೆ ಎಂದರು.

    ಹಿರಿಯ ನಟ ದೇವದಾಸ್ ಕಾಪಿಕಾಡ್ ಮಾತನಾಡಿ, ‘ಪಿಚ್ಚರ್’ ತುಳು ಚಿತ್ರರಂಗಕ್ಕೆ ಮತ್ತೊಂದು ಉತ್ತಮ ಕೊಡುಗೆಯಾಗಲಿದ್ದು, ನಾಯಕ ನಟ ನಿತ್ಯಪ್ರಕಾಶ್ ಬಂಟ್ವಾಳ್ ಅವರ ಅಭಿನಯ ಪ್ರೇಕ್ಷಕರ ಗಮನ ಸೆಳೆಯಲಿದೆ ಎಂಬ ವಿಶ್ವಾಸವಿದೆ ಎಂದರು. ಪಿಚ್ಚರ್ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ಮತ್ತು ಅಮೃತಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರು, ಅರವಿಂದ್ ಬೋಳಾರ್, ಪುಷ್ಪರಾಜ್ ಬೊಳ್ಳಾರ್ ಹಾಗೂ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ಚಿತ್ರಕ್ಕೆ ಸಂತೋಷ್ ರೈ ಹಾಗೂ ಚಂದ್ರಶೇಖರ್ ಕೆ.ಎಸ್. ಛಾಯಾಗ್ರಹಣ ನೀಡಿದ್ದು, ಸ್ಯಾಮ್ಯುಯೆಲ್ ಅಬಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ನಾಯಕ ನಿತ್ಯಪ್ರಕಾಶ್ ಬಂಟ್ವಾಳ್, ನಾಯಕಿ ಅಮೃತಾ, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ಅರ್ಜುನ್ ಕಾಪಿಕಾಡ್, ಸ್ಯಾಮ್ಯುಯೆಲ್ ಅಬಿ ಸೇರಿದಂತೆ ಚಿತ್ರತಂಡದ ಸದಸ್ಯರು ಇದ್ದರು.

    Post Views: 9

    Related Posts

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026

    ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    August 5, 2026

    ಬಸ್‌ಗಳ ವಿರುದ್ಧ ಆರ್‌ಟಿಒ-ಪೊಲೀಸರ ಕಾರ್ಯಾಚರಣೆ; 23 ಪ್ರಕರಣ ದಾಖಲು

    August 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026

    ನಾಳೆ (ಆ.7) ರಂದು ರಾಜ್ಯಾದ್ಯಂತ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಬಿಡುಗಡೆ

    August 6, 2026

    ಮಂಗಳೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಗಾಂಜಾ ಪತ್ತೆ..!! ಮೂವರು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    August 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.