Facebook Twitter Instagram
    Thursday, August 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA
    ಕರಾವಳಿ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

    August 6, 2026
    Share

    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು.

    ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಎನ್‌ಐಎ ರೆಡ್ ಕಾರ್ನರ್ ನೋಟಿಸ್ ಹಾಗೂ ಲುಕೌಟ್ ನೋಟಿಸ್ ಹೊರಡಿಸಿತ್ತು. ಅಲ್ಲದೆ, ಆರೋಪಿ ಉಮರ್ ಫಾರೂಕ್ ಸುಳಿವು ನೀಡಿದವರಿಗೆ ₹4 ಲಕ್ಷ ಇನಾಮು ಘೋಷಿಸಲಾಗಿತ್ತು.

    ಇದೀಗ ಉಮರ್ ಫಾರೂಕ್ ಬಂಧನದೊಂದಿಗೆ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಕೃತ್ಯ ಎಸಗಿದ ನಂತರ ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಸತತ ಪರಿಶ್ರಮದ ನಂತರ ಎನ್‌ಐಎ ತನಿಖಾಧಿಕಾರಿಗಳು ಕೊಚ್ಚಿಯಲ್ಲಿ ಸೆರೆಹಿಡಿದಿದ್ದು, ಮುಂದಿನ ಕಾನೂನು ಕ್ರಮಗಳಿಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

    ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್ ಅಡಗಿ ಕುಳಿತಿದ್ದ ಪ್ರವೀಣ ನೆಟ್ಟಾರು ಕೊಲೆಯ ಬಳಿಕ ಪ್ರಮುಖ ಆರೋಪಿಗಳನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡಿದ. ಕೇರಳದ ಕೊಚ್ಚಿಯಲ್ಲಿ ನಿಷೇಧಿತ ಪಿ ಎಫ್ ಐ ಈತನಿಗೆ ಆಶ್ರಯ ಕೊಟ್ಟಿದೆ. ಸಂಘಟನೆಯ ಪ್ರಮುಖರಿಂದ ಕೊಚ್ಚಿಯಲ್ಲಿ ಆಶ್ರಯ ಪಡೆದಿದ್ದ. ಅಜ್ಞಾತ ಸ್ಥಳದಲ್ಲಿ ಹತ್ತಿ ಆರೋಪಿ ಒಮ್ಮರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು ಕಾಣಿಸಿಕೊಳ್ಳದಂತೆ ನಾಲ್ಕು ವರ್ಷದಿಂದ ರಕ್ಷಣೆ ಮಾಡಿದ್ದರು . ಹತ್ತೆಯ ಬಳಿಕ ಕೊಚ್ಚಿಯಲ್ಲಿ ಉಮರ್ ಫಾರೂಕ್ ವಾಸ್ತವ್ಯ ಹೂಡಿದ್ದ. ಇದೀಗ NIA ಅಧಿಕಾರಿಗಳು ಆತನನ್ನು ಅರೆಸ್ಟ್ ಮಾಡಿದ್ದಾರೆ.

    Post Views: 13

    Related Posts

    ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ!!

    August 6, 2026

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026

    ನಾಳೆ (ಆ.7) ರಂದು ರಾಜ್ಯಾದ್ಯಂತ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಬಿಡುಗಡೆ

    August 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ!!

    August 6, 2026

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

    August 6, 2026

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.