Facebook Twitter Instagram
    Sunday, August 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಟಾರ್‌ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಅವಧಿ ಮೀರಿದ ಹಾಲು, ಮಾಂಸ, ಮೀನು ಪತ್ತೆ!
    ಇತ್ತೀಚಿನ ಸುದ್ದಿ

    ಸ್ಟಾರ್‌ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಅವಧಿ ಮೀರಿದ ಹಾಲು, ಮಾಂಸ, ಮೀನು ಪತ್ತೆ!

    August 8, 2026
    Share

    ಬೆಂಗಳೂರಿನ ಪ್ರತಿಷ್ಠಿತ 5-ಸ್ಟಾರ್ ಮತ್ತು 3-ಸ್ಟಾರ್ ಹೋಟೆಲ್‌ಗಳು ತಮ್ಮ ಗ್ರಾಹಕರಿಗೆ ಅವಧಿ ಮೀರಿದ ಹಾಗೂ ನೈರ್ಮಲ್ಯ ರಹಿತ ಆಹಾರ ಪದಾರ್ಥಗಳನ್ನು ನೀಡುತ್ತಿರುವುದು ಆಹಾರ ಸುರಕ್ಷತಾ ಇಲಾಖೆಯ ದಾಳಿಯಿಂದ ಬಹಿರಂಗವಾಗಿದೆ. ಆಗಸ್ಟ್ 7ರಂದು ರಾಜ್ಯ ಆಹಾರ ಸುರಕ್ಷತಾ ವಿಭಾಗ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಬಿಬಿಎಂಪಿ ವ್ಯಾಪ್ತಿಯ ಜಂಟಿ ಸಹಯೋಗದೊಂದಿಗೆ ನಗರದಾದ್ಯಂತ ಈ ದಿಢೀರ್ ತಪಾಸಣೆ ನಡೆಸಿದೆ.

    ಬೆಂಗಳೂರಿನ ಬೇರೆ ಬೇರೆ ಭಾಗಗಳಲ್ಲಿ ಒಟ್ಟು 30 ವಿಶೇಷ ತಂಡಗಳನ್ನು ರಚಿಸಿ ದಾಳಿ ನಡೆಸಲಾಗಿದ್ದು, ನಗರದ ಪ್ರಮುಖ 26 ಸ್ಟಾರ್‌ ಹೋಟೆಲ್‌ಗಳ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ವೇಳೆ ಇಲಾಖೆಯ ಅಧಿಕಾರಿಗಳು ಒಟ್ಟು 35 ವಿಭಿನ್ನ ಆಹಾರ ಮಾದರಿಗಳನ್ನು (Food Samples) ವಶಕ್ಕೆ ಪಡೆದು, ಹೆಚ್ಚಿನ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

    ಕಾನೂನು ಉಲ್ಲಂಘನೆ ಮತ್ತು ಲೋಪಗಳು: ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006 ಹಾಗೂ 2011ರ ಪರವಾನಗಿ ಮತ್ತು ನೋಂದಣಿ ನಿಯಮಾವಳಿಗಳ ಅಡಿಯಲ್ಲಿ ಈ ಪರಿಶೀಲನೆ ನೆರವೇರಿತು. ಕಾರ್ಯಾಚರಣೆಯ ಸಂದರ್ಭದಲ್ಲಿ ಹೋಟೆಲ್‌ಗಳ ಅಡುಗೆ ಮನೆಗಳ ಅಸ್ವಚ್ಛತೆ, ಕಳಪೆ ನಿರ್ವಹಣೆ ಹಾಗೂ ಆಹಾರ ಸಂಗ್ರಹಣಾ ಕೊಠಡಿಗಳ ದುಸ್ಥಿತಿ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪದಾರ್ಥಗಳನ್ನು ಒಂದೇ ಕಡೆ ಸಂಗ್ರಹಿಸಿಡುವುದು, ಲೇಬಲ್ ಇಲ್ಲದ ಬ್ರಾಂಡ್‌ ರಹಿತ ಪದಾರ್ಥಗಳ ಬಳಕೆ, ಬೂಜು ಹಿಡಿದ ತರಕಾರಿಗಳು ಹಾಗೂ FSSAI ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಪ್ಯಾಕ್ ಮಾಡಲಾಗಿದ್ದ ಆಹಾರ ಉತ್ಪನ್ನಗಳು ಪತ್ತೆಯಾಗಿವೆ. ಮಾಂಸದ ಪೊಟ್ಟಣಗಳಲ್ಲಿ ಲೇಬಲಿಂಗ್ ನಿಯಮಗಳ ಸ್ಪಷ್ಟ ಉಲ್ಲಂಘನೆ ಎದ್ದು ಕಾಣುತ್ತಿತ್ತು.

    ವಶಪಡಿಸಿಕೊಂಡ ವಿವಿಧ ಪದಾರ್ಥಗಳು: ಅಧಿಕಾರಿಗಳು ಪರಿಶೀಲನೆ ನಡೆಸಿದ ಮಾದರಿಗಳಲ್ಲಿ ಕೋಳಿಮಾಂಸ, ಕುರಿಮಾಂಸ, ಮೀನು, ಹಾಲು ಮತ್ತು ಹಾಲಿನ ಉತ್ಪನ್ನಗಳು, ಬೇಕರಿ ಪದಾರ್ಥಗಳು, ಚಹಾಪುಡಿ, ಅಡುಗೆ ಎಣ್ಣೆ, ಖಾರದಪುಡಿ, ಅರಶಿಣ, ಚೀಸ್, ಸಾಸ್, ವಿನೆಗರ್, ಶುಂಠಿ, ಮೆಣಸಿನಪುಡಿ, ಹಪ್ಪಳ ಮತ್ತು ಗೋಡಂಬಿಯಂತಹ ನಿತ್ಯ ಬಳಕೆಯ ಸಾಮಗ್ರಿಗಳು ಸೇರಿವೆ.

    Post Views: 41

    Related Posts

    ಸ್ಟಾರ್ ಹೋಟೆಲ್‌ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ

    August 9, 2026

    ಉಡುಪಿ: ಡೇವಿಡ್ ಡಿಸೋಜಾ ಹತ್ಯೆ ಹಿಂದೆ ಉತ್ತರ ಭಾರತದ ಸುಪಾರಿ ಕಿಲ್ಲರ್‌ಗಳು..! ಮೂವರು ಆರೋಪಿಗಳ ಬಂಧನ

    August 8, 2026

    ಮಂಗಳೂರು: ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣ- ಇಬ್ಬರು ಆರೋಪಿಗಳ ಬಂಧನ

    August 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸ್ಟಾರ್ ಹೋಟೆಲ್‌ಗಳಲ್ಲಿ ಕಳಪೆ ಆಹಾರ: ಲೈಸೆನ್ಸ್ ರದ್ದತಿಗೆ ಸಚಿವ ಖಾದರ್ ಖಡಕ್ ಆದೇಶ

    August 9, 2026

    ಸ್ಟಾರ್‌ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಅವಧಿ ಮೀರಿದ ಹಾಲು, ಮಾಂಸ, ಮೀನು ಪತ್ತೆ!

    August 8, 2026

    ಉಡುಪಿ: ಡೇವಿಡ್ ಡಿಸೋಜಾ ಹತ್ಯೆ ಹಿಂದೆ ಉತ್ತರ ಭಾರತದ ಸುಪಾರಿ ಕಿಲ್ಲರ್‌ಗಳು..! ಮೂವರು ಆರೋಪಿಗಳ ಬಂಧನ

    August 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.