Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ದಕ್ಷಿಣ ಪೊಲೀಸರು..!
    ಇತ್ತೀಚಿನ ಸುದ್ದಿ

    ಮಂಗಳೂರು: ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ದಕ್ಷಿಣ ಪೊಲೀಸರು..!

    September 13, 2022
    Share

    ಮಂಗಳೂರು: ಹಲವಾರು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆರೋಪಿ ಅರೇನಹಳ್ಳಿ ಪಿರಿಯಾಪಟ್ಟಣದ ಅಸ್ಲಾಂ ಪಾಶ (36 ವರ್ಷ) ಎಂಬವನ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಅ ಕ್ರ ನಂ. 300/1997 ರಲ್ಲಿ ಪ್ರಕರಣ ದ 379.411 ಐಪಿಸಿ ಅಂಬಾಸಿಡರ್ 3 ಕಾರು ಕಳವು ಪ್ರಕರಣ ದಾಖಲಾಗಿದ್ದು,ಸದರಿ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಕಾರಣ ಪ್ರಕರಣವನ್ನ 2015 ರಲ್ಲಿ LPC ಮಾಡಲಾಗಿತ್ತು.
    ಆರೋಪಿಯು ಪೊಲೀಸರ ಕೈಗೆ ಸಿಗದೇ ಸುಮಾರು 20 ವರ್ಷ ತಲೆಮರಿಸಿಕೊಂಡಿದ್ದು ಆತನ ಮೇಲೆ ನ್ಯಾಯಾಲಯವು ದಸ್ತಗಿರಿ LPC ವಾರೆಂಟ್ ಹೊರಡಿಸಲಾಗಿ ಆರೋಪಿಯನ್ನು ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಂತೆ ಸೆ.12 ರಂದು ಪತ್ತೆಮಾಡಿ ಹೆಡ್ ಕಾನ್ಸ್ಟೇಬಲ್ ಪುಟ್ಟರಾಮ್ ಹಾಗೂ ಪಿ.ಸಿ ರವಿಕುಮಾರ್ ಎಂಬುವರು ಆರೋಪಿಯನ್ನ ಸೋಮವಾರ ಪಿರಿಯಾಪಟ್ಟಣದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


    ಆರೋಪಿಯ ಮೇಲೆ ಹುಣಸೂರು, ಪಿರಿಯಾಪಟ್ಟಣ, ಬೆಟ್ಟದಪುರ, ಉದಯಪುರ, ಭದ್ರಾವತಿ ಠಾಣೆ, ಮಂಡ್ಯ ಮೈಸೂರು ನಗರ, ಬೆಂಗಳೂರು ನಗರ ಹೀಗೆ ಹಲವಾರು ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುತ್ತವೆ.
    ಆರೋಪಿಯು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನ ಕಳವು ಮಾಡಿ ಅದರ ಚೇಸ್ ನಂಬರನ್ನು ಜಜ್ಜಿ ಕಾರಿನ ಬಣ್ಣ ಹಾಗೂ ನಂಬರ್ ಪ್ಲೇಟ್ ಅನ್ನು ಬದಲಾಯಿಸಿ ಕಡಿಮೆ ಬೆಲೆಗೆ ಬೆಂಗಳೂರಿಗೆ ಮಾರಾಟ ಮಾಡುವುದರಲ್ಲಿ ಚಾಲಾಕಿತನವನ್ನು ಹೊಂದಿರುವನಾಗಿದ್ದಾನೆ.

    Post Views: 273

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.