Facebook Twitter Instagram
    Thursday, August 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಬಂಧನ- ಬೆರಳಚ್ಚು ಪರಿಶೀಲನೆಯಿಂದ ಅಸಲಿ ಗುರುತು ಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಬಂಧನ- ಬೆರಳಚ್ಚು ಪರಿಶೀಲನೆಯಿಂದ ಅಸಲಿ ಗುರುತು ಪತ್ತೆ

    August 19, 2026
    Share

    ಮಂಗಳೂರು: ಸುಮಾರು 15 ವರ್ಷಗಳಿಂದ ನ್ಯಾಯಾಲಯದ ಎಲ್‌ಪಿಸಿ (LPC) ವಾರೆಂಟ್‌ಗೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ 2011ರಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ ಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಮಂಗಳೂರಿನ 3ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ SPLIT CC ನಂ. 02/2014ರಂತೆ ವಿಚಾರಣೆಯಾಗಿ, LPC ನಂ. 10/2019ರಂತೆ ದೀರ್ಘಕಾಲದಿಂದ ಬಾಕಿ ಉಳಿದಿತ್ತು.

    ಪ್ರಕರಣದ ಎಲ್‌ಪಿಸಿ ವಾರೆಂಟ್ ಆರೋಪಿತೆಯಾಗಿದ್ದ ಆಯಿಷಾ (36), ಪತಿ ಹಸನಬ್ಬ, ಬಂಗ್ಲಗುಡ್ಡೆ ಮನೆ, ಗುರುಪುರ, ಮಂಗಳೂರು ಎಂಬ ವಿಳಾಸವನ್ನು ನೀಡಿದ್ದರು. ಪ್ರಕರಣ ದಾಖಲಾಗಿ ದಸ್ತಗಿರಿಯಾದ ಸಂದರ್ಭದಲ್ಲಿ ತಮ್ಮ ನಿಜವಾದ ಹೆಸರು, ಪತಿಯ ಹೆಸರು ಹಾಗೂ ವಿಳಾಸವನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

    ನಂತರ ಆರೋಪಿತೆಯ ನಿಜವಾದ ಹೆಸರು ಸೆಫಿಯಾ (53), ಪತಿ ದಿವಂಗತ ಅಬೂಬುಕ್ಕರ್, ಹಂಡೇಲ ಮಸೀದಿ ಬಳಿ, ಪುತ್ತಿಗೆ ಗ್ರಾಮ, ಬಡಗಮಿಜಾರು, ಮಿಜಾರು, ಮೂಡಬಿದರೆ ತಾಲೂಕು, ಮಂಗಳೂರು ಎಂಬುದು ಪತ್ತೆಯಾಗಿದೆ. ಹೆಸರು ಹಾಗೂ ವಿಳಾಸ ಬದಲಿಸಿಕೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿತೆಯ ಬೆರಳಚ್ಚನ್ನು ಮಂಗಳೂರು ಬೆರಳಚ್ಚು ಘಟಕದ ತಜ್ಞರಿಂದ ಪರಿಶೀಲಿಸಲಾಗಿದ್ದು, ಆಯಿಷಾ ಹೆಸರಿನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2011ರ ಪ್ರಕರಣದ ಕಡತದಲ್ಲಿನ ಬೆರಳಚ್ಚಿನೊಂದಿಗೆ ಹೋಲಿಕೆಯಾಗಿರುವುದಾಗಿ ತಜ್ಞರು ವರದಿ ನೀಡಿದ್ದಾರೆ.

    ಈ ವರದಿಯ ಆಧಾರದ ಮೇಲೆ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಆರೋಪಿತೆಯನ್ನು ಪತ್ತೆಹಚ್ಚಿ ಆಗಸ್ಟ್ 18, 2026ರಂದು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿತೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 45

    Related Posts

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.