Facebook Twitter Instagram
    Thursday, August 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    August 27, 2026
    Share

    ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.

    ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ ಅನ್ವಯ 1 ವರ್ಷ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

    2019ರ ಆಕ್ಟೋಬರ್‌ 8 ರ ಮಧ್ಯಾಹ್ನ ಸುಮಾರು 12 ಗಂಟೆಗೆ ಕಂಬಳಪದವಿನಲ್ಲಿರುವ ತನ್ನ ಮನೆಯಲ್ಲಿ ಆರೋಪಿ ಸ್ಯಾಮ್ಸನ್, ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಬಳಿ ಮೊಬೈಲ್ ಫೋನ್ ಬಳಸಲು ನೀಡುವಂತೆ ಕೇಳಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ತೀವ್ರ ಕೋಪಗೊಂಡ ಸ್ಯಾಮ್ಸನ್, ಸುತ್ತಿಗೆಯಿಂದ ತಂಗಿಯ ತಲೆಗೆ ಬಲವಾಗಿ ಹಲ್ಲೆ ನಡೆಸಿ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಆಕೆಯ ಮೃತದೇಹವನ್ನು ಮನೆಯ ಹಿಂಭಾಗದ ಪೊದೆಯಲ್ಲಿ ಬಚ್ಚಿಟ್ಟಿದ್ದನು.

    ಘಟನೆಯ ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಮೃತ ಫಿಯೋನಾರ ತಂದೆ ಫ್ರಾನ್ಸಿಸ್ ಕುಟಿನ್ಹಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ಅಪಹರಣ ಪ್ರಕರಣ (ಕಲಂ 363 ಐಪಿಸಿ) ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ಅವರು, ತನಿಖೆ ನಡೆಸಿ ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು, 2020ರ ಜನವರಿ 10 ರಂದು ನ್ಯಾಯಾಲಯಕ್ಕೆ ಕಲಂ 302 ಮತ್ತು 201 ಐಪಿಸಿ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಘಟನೆಯ ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ಮೃತ ಫಿಯೋನಾರ ತಂದೆ ಫ್ರಾನ್ಸಿಸ್ ಕುಟಿನ್ಹಾ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ಅಪಹರಣ ಪ್ರಕರಣ (ಕಲಂ 363 ಐಪಿಸಿ) ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಮಂಗಳೂರು ದಕ್ಷಿಣ ಉಪವಿಭಾಗದ ಅಂದಿನ ಎಸಿಪಿ ಟಿ. ಕೋದಂಡ ರಾಮ್ ಅವರು, ತನಿಖೆ ನಡೆಸಿ ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದರು. ತನಿಖೆ ಪೂರ್ಣಗೊಳಿಸಿದ ಪೊಲೀಸರು, 2020ರ ಜನವರಿ 10 ರಂದು ನ್ಯಾಯಾಲಯಕ್ಕೆ ಕಲಂ 302 ಮತ್ತು 201 ಐಪಿಸಿ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ದಿನಾಂಕ 24-08-2026 ರಂದು ಆರೋಪಿಗೆ ಶಿಕ್ಷೆ ಪ್ರಕಟಿಸಿದೆ. ಅಭಿಯೋಜನ ಪರವಾಗಿ ಜ್ಯೋತಿ ಪ್ರಮೋದ ನಾಯಕ್ ವಾದ ಮಂಡಿಸಿದ್ದರು.

    Post Views: 8

    Related Posts

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026

    ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ- ಸಚಿವ ಯುಟಿ ಖಾದರ್

    August 26, 2026

    KINGS Bazaar ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ

    August 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026

    ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    August 27, 2026

    ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ- ಸಚಿವ ಯುಟಿ ಖಾದರ್

    August 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.