Facebook Twitter Instagram
    Friday, September 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ- ಪ್ರಕರಣ ದಾಖಲು

    September 4, 2026
    Share

    ಉಡುಪಿ: ನಕಲಿ ಹಣಕಾಸು ಸಂಸ್ಥೆಯ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ.

    ಕೆಳಾರ್ಕಳಬೆಟ್ಟುವಿನ 65 ವರ್ಷದ ಶ್ರೀನಿವಾಸ ಆಚಾರ್ಯ ಅವರು ಚಿನ್ನದ ಕೆಲಸ ಮಾಡಿಕೊಂಡಿದ್ದು, ಮೇ 21ರಂದು ಸುಮಾರು 83.1 ಗ್ರಾಂ ಚಿನ್ನವನ್ನು ಸುವಿಧಾ ಫೈನಾನ್ಸ್‌ ಅಂಡ್ ಇನ್‌ವೆಸ್ಟ್‌ಮೆಂಟ್‌ನಲ್ಲಿ ಅಡಮಾನ ಇಟ್ಟಿದ್ದರು.

    ಫೈನಾನ್ಸ್‌ನಲ್ಲಿ ಬಡ್ಡಿ ಹೆಚ್ಚಿರುವುದನ್ನು ಗಮನಿಸಿದ ಅವರ ಪುತ್ರ ಶ್ರೀಕಾಂತ, ಪರಿಚಯದ ಆನಂದ ನಾಯ್ಕ್‌ ಎಂಬವರ ಮೂಲಕ ಮಂಜುನಾಥ ಪೂಜಾರಿ ಎಂಬಾತನನ್ನು ಪರಿಚಯಿಸಿದ್ದ ಎನ್ನಲಾಗಿದೆ.

    ಮಂಜುನಾಥ ಪೂಜಾರಿ ಹಣ ನೀಡಿ ಸುವಿಧಾ ಫೈನಾನ್ಸ್‌ನಲ್ಲಿದ್ದ ಚಿನ್ನವನ್ನು ಬಿಡಿಸಿಕೊಂಡು, ಶ್ರೀನಿವಾಸ ಆಚಾರ್ಯರನ್ನು ಇಂಡಿಯನ್ ಓವರ್ಸೀಸ್ ಬ್ಯಾಂಕ್‌ಗೆ ಕರೆದುಕೊಂಡು ಹೋಗಿ ಖಾತೆ ತೆರೆಯಿಸಿ, ಚಿನ್ನಾಭರಣದ ಫೋಟೋ ತೆಗೆಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಬಳಿಕ ಜುಲೈ 21, 2026ರ ದಿನಾಂಕ ಹೊಂದಿರುವ ಕೃಷ್ಣ ಫೈನಾನ್ಸ್‌ ಲಿಮಿಟೆಡ್‌ನ ನಕಲಿ ರಶೀದಿಯನ್ನು ನೀಡಿದ್ದಾನೆ ಎನ್ನಲಾಗಿದೆ. ಚಿನ್ನವನ್ನು ವಾಪಸ್ ಪಡೆಯಲು ಆರೋಪಿತನಿಗೆ ಕರೆ ಮಾಡಿದಾಗ ಆತ ಕರೆ ಸ್ವೀಕರಿಸಿರಲಿಲ್ಲ.

    ರಶೀದಿಯಲ್ಲಿ ನಮೂದಿಸಿರುವ ಕೃಷ್ಣ ಫೈನಾನ್ಸ್‌ ಲಿಮಿಟೆಡ್‌ ಎಂಬ ಸಂಸ್ಥೆಯೇ ಅಸ್ತಿತ್ವದಲ್ಲಿಲ್ಲ ಎಂದು ಆರೋಪಿಸಲಾಗಿದೆ.

    ಮಂಜುನಾಥ ಪೂಜಾರಿ ಹಾಗೂ ಆನಂದ ನಾಯ್ಕ್‌ ಅವರು ನಕಲಿ ದಾಖಲೆ ಸೃಷ್ಟಿಸಿ, ಮೋಸ ಹಾಗೂ ನಂಬಿಕೆ ದ್ರೋಹದ ಮೂಲಕ 83.1 ಗ್ರಾಂ ಚಿನ್ನ ಪಡೆದು ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿದ್ದಾರೆ ಎಂದು ಶ್ರೀನಿವಾಸ ಆಚಾರ್ಯ ಅವರು ದೂರು ನೀಡಿದ್ದಾರೆ.

    ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2026ರಂತೆ BNS ಕಲಂ 340(2), 316(2), 318(4) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 11

    Related Posts

    ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ

    September 4, 2026

    ಕರ್ತವ್ಯ ಲೋಪ ಆರೋಪ- ಬಂಟ್ವಾಳ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಸೇವೆಯಿಂದ ಅಮಾನತು

    September 4, 2026

    ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

    September 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ

    September 4, 2026

    ಕರ್ತವ್ಯ ಲೋಪ ಆರೋಪ- ಬಂಟ್ವಾಳ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಸೇವೆಯಿಂದ ಅಮಾನತು

    September 4, 2026

    ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ- ಪ್ರಕರಣ ದಾಖಲು

    September 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.