Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    Share

    ಮಂಗಳೂರು:  ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಾನು ಮಾಧ್ಯಮದವನು ಎಂದು ಸುಳ್ಳು ಹೇಳಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. 

    ಅಲ್ಲದೆ, ಈ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ.

    ಸೆಪ್ಟೆಂಬರ್ 9ರಂದು ಬೆಳಿಗ್ಗೆ 10:50 ರ ಸುಮಾರಿಗೆ ಬಂಟ್ಸ್ ಹಾಸ್ಟೆಲ್ ಬಳಿ ಸಂಚಾರ ಪೂರ್ವ ಠಾಣೆಯ ಸಿಪಿಸಿ ಅಭಿಷೇಕ್ ಬಿ. ಜಿ. ಹಾಗೂ ಸಿಎಚ್‌ಸಿ ಶಂಕರಪ್ಪ ಅವರು ಕರ್ತವ್ಯದಲ್ಲಿದ್ದರು. ಈ ವೇಳೆ ಪಿವಿಎಸ್ ಕಡೆಯಿಂದ ಬಂದ ‘KA 19 EP 2541’ ನೋಂದಣಿ ಸಂಖ್ಯೆಯ ಆಕ್ಟಿವಾ ದ್ವಿಚಕ್ರ ವಾಹನದ ನಂಬರ್ ಪ್ಲೇಟ್‌ನ ಕೊನೆಯ ಸಂಖ್ಯೆಗೆ ಸ್ಟಿಕ್ಕರ್ ಅಂಟಿಸಿರುವುದು ಕಂಡುಬಂದಿದೆ.

    ಪೋಲೀಸ್ ಸಿಬ್ಬಂದಿ ವಾಹನ ತಡೆದು ಫೋಟೋ ತೆಗೆಯಲು ಯತ್ನಿಸಿದಾಗ, ಸವಾರನು “ಫೋಟೋ ಯಾಕೆ ತೆಗೆಯುತ್ತೀರಿ?” ಎಂದು ಜೋರು ಧ್ವನಿಯಲ್ಲಿ ತಕರಾರು ತೆಗೆದಿದ್ದಾನೆ. ಈ ವೇಳೆ “ಜೋರು ಮಾತನಾಡಬೇಡ” ಎಂದು ಸಿಬ್ಬಂದಿ ಸೂಚಿಸಿದ್ದಾರೆ.

    “ನಾನು ಮೀಡಿಯಾದವನು” ಎಂದು ಕರ್ತವ್ಯಕ್ಕೆ ಅಡ್ಡಿ: ಅಷ್ಟರಲ್ಲೇ ಮಧ್ಯಪ್ರವೇಶಿಸಿದ ಅಪರಿಚಿತ ವ್ಯಕ್ತಿಯೊಬ್ಬ, “ಯಾಕೆ ಅವಾಚ್ಯ ಶಬ್ದದಿಂದ ಬೈಯ್ಯುತ್ತಿದ್ದೀರಿ? ನಾನು ಮೀಡಿಯಾದವನು, ನಿಮ್ಮ ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಹೆದರಿಸಿದ್ದಾನೆ. ಅಲ್ಲದೆ, “ನಿನ್ನ ಕ್ಯಾಪ್ ಎಲ್ಲಿ?, ನಮ್ಮ ಟ್ಯಾಕ್ಸ್ ನಿಂದ ನೀವು ಬದುಕುವುದು” ಎಂದು ಏರುಧ್ವನಿಯಲ್ಲಿ ಮಾತನಾಡುತ್ತಾ, ಸುಮಾರು 15 ನಿಮಿಷಗಳ ಕಾಲ ಸಂಚಾರ ನಿಯಂತ್ರಣ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಸ್ಥಳಕ್ಕೆ ಎಎಸ್‌ಐ ಜಗದೀಶ ಹಾಗೂ ಸಿಪಿಸಿ ಪ್ರವೀಣ್ ಧಾವಿಸುತ್ತಿದ್ದಂತೆ ಆರೋಪಿಯು ಅಲ್ಲಿಂದ ಕಾಲ್ಕಿತ್ತಿದ್ದಾನೆ.

    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್: ತರುವಾಯ ಆರೋಪಿಯು ತಾನು ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು, ಪೊಲೀಸ್ ಇಲಾಖೆ ಹಾಗೂ ಕರ್ತವ್ಯನಿರತ ಸಿಬ್ಬಂದಿಯ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವಂತೆ ಅಪಪ್ರಚಾರ ಮಾಡಿದ್ದಾನೆ. ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಇಲಾಖೆಯ ತೇಜೋವಧೆಗೆ ಯತ್ನಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

    Post Views: 1

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.