Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ
    ಇತ್ತೀಚಿನ ಸುದ್ದಿ

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    Share

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಖದೀಮನೊಬ್ಬ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ, ಸೋಷಿಯಲ್ ಮೀಡಿಯಾ ಫಾಲೋವರ್ಸ್‌ಗೆ ಕಳುಹಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿ ಹಣ ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಬೆದರಿದ 19 ವರ್ಷದ ಸಂತ್ರಸ್ತ ಯುವಕ ಹಂತ ಹಂತವಾಗಿ ಬರೋಬ್ಬರಿ 5,24,712 ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

    ಸಂತ್ರಸ್ತ ಯುವಕ ಇನ್‌ಸ್ಟಾಗ್ರಾಂ ಬಳಸುತ್ತಿದ್ದ ವೇಳೆ ಜಮ್‌ಶೇದ್ ಎಂಬ ಹೆಸರಿನ ವ್ಯಕ್ತಿಯೊಬ್ಬ ಕಮೆಂಟ್ ಬಾಕ್ಸ್‌ನಲ್ಲಿ ‘+919728550836’ ಎಂಬ ಮೊಬೈಲ್ ಸಂಖ್ಯೆ ನೀಡಿ ವಾಟ್ಸಾಪ್‌ನಲ್ಲಿ ಚಾಟ್ ಮಾಡುವಂತೆ ಕೋರಿದ್ದ. ಜೂನ್ 19, 2026 ರಿಂದ ವಾಟ್ಸಾಪ್ ಚಾಟ್ ಆರಂಭಿಸಿದ ಆ ಖದೀಮ, ಮೊದಲು 300 ರೂಪಾಯಿ ಹಣ ನೀಡುವಂತೆ ಕೇಳಿದ್ದಾನೆ. ಯುವಕ ನಿರಾಕರಿಸಿದರೂ ಪದೇಪದೇ ಕರೆ ಮಾಡಿ ಬೇಡಿಕೊಂಡಾಗ ಯುವಕ ಕರುಣೆಯಿಂದ 300 ರೂ. ಫೋನ್ ಪೇ ಮಾಡಿದ್ದರು.

    ಅದಾದ ಬಳಿಕ ಆರೋಪಿಯು ಬೇರೆ ಬೇರೆ ವಾಟ್ಸಾಪ್ ಸಂಖ್ಯೆಗಳಿಂದ (+918290653224, +919671689249 ಹಾಗೂ +919121411726) ಕರೆ ಮಾಡಿ ಮತ್ತೆ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. ಯುವಕ ಸ್ಪಷ್ಟವಾಗಿ ಹಣ ನೀಡಲು ನಿರಾಕರಿಸಿದಾಗ, ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಎಡಿಟ್ (Morph) ಮಾಡಿ ವಾಟ್ಸಾಪ್‌ಗೆ ಕಳುಹಿಸಿದ್ದಾನೆ. ಅಷ್ಟಕ್ಕೇ ನಿಲ್ಲಿಸದೆ, ಈ ಎಡಿಟೆಡ್ ಅಶ್ಲೀಲ ಫೋಟೋವನ್ನು ನಿನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿರುವ ಫಾಲೋವರ್ಸ್‌ಗೆ ಕಳುಹಿಸಿ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಮಾನಹಾನಿಯ ಭಯಕ್ಕೆ ಬಿದ್ದ ಯುವಕ, ಕರಗತನದಿಂದ ಪಾರಾಗಲು ಆರೋಪಿ ಕಳುಹಿಸಿದ ವಿವಿಧ ಸ್ಕ್ಯಾನರ್‌ಗಳಿಗೆ ಜೂನ್ 19 ರಿಂದ ಜುಲೈ 23, 2026 ರವರೆಗೆ ತಮ್ಮ ಬ್ಯಾಂಕ್ ಆಫ್ ಬರೋಡಾ ಖಾತೆಯಿಂದ ಫೋನ್ ಪೇ ಮೂಲಕ ಹಂತ ಹಂತವಾಗಿ ಒಟ್ಟು 5,24,712 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಸರಣಿ ಬ್ಲ್ಯಾಕ್‌ಮೇಲ್‌ನಿಂದ ಕಂಗಾಲಾದ ಯುವಕ ಕೊನೆಗೆ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೈಬರ್ ಕ್ರೈಮ್ (CEN) ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಣ ಪಡೆದ ಯುಪಿಐ ಐಡಿ ಹಾಗೂ ಬ್ಯಾಂಕ್ ಖಾತೆಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.

    Post Views: 1

    Related Posts

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಿರಿಕ್..!! ಕೆಎಸ್‌ಆರ್‌ಟಿಸಿ ಕಂಡಕ್ಟರ್, ಚಾಲಕನ ಮೇಲೆ ಹಲ್ಲೆ

    September 15, 2026

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.