Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆ
    ಇತ್ತೀಚಿನ ಸುದ್ದಿ

    ಕಾರ್ಕಳ: ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆ

    September 22, 2022
    Share

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಈ ಶಾಸನ ಪತ್ತೆಯಾಗಿದ್ದು ಇದು ಸುಮಾರು 1409 ಇಸವಿಯದ್ದಾಗಿರಬಹುದೆಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

    ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಎಸ್ಎ ಕೃಷ್ಣಯ್ಯ ಹಾಗೂ ಕಡಿಯಾಳಿ ಯು. ಕಮಲಾಬಾಯಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಕೆ ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಫ್ಲೀಚ್ ಇಂಡಿಯಾ ಫೌಂಡೇಶನ್ ಹೈದರಾಬಾದ್ ಇದರ ಸಹಾಯಕ ಸಂಶೋಧಕ ಶ್ರುತೇಶ್ ಆಚಾರ್ಯ ಶಿಲಾಶಾಸನವನ್ನು ಓದಿ ಅಧ್ಯಯನ ನಡೆಸಿದ್ದಾರೆ.

    ಶಿಲಾ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರ ಹಾಗೂ ಶಂಖ ಚಕ್ರಗಳ ಕೆತ್ತನೆಯನ್ನು ಕೆತ್ತಲಾಗಿದೆ ಇದು ವೈಷ್ಣವ ಪಂಥದ ಶಿಲಾ ಶಾಸನ ವಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

    1409 ಇಸವಿಯ ನವಂಬರ್ 7 ರ ಗುರುವಾರದಂದು ಇದನ್ನು ಸ್ಥಾಪಿಸಿರಬಹುದೆಂದು ಊಹಿಸಲಾಗಿದೆ .ಈ ಶಾಸನದಲ್ಲಿ 14ನೇ ಶತಮಾನದ ಕನ್ನಡವನ್ನು ಬಳಕೆ ಮಾಡಲಾಗಿದ್ದು ಇದು ವಿಜಯನಗರ ಕಾಲದ ಕನ್ನಡ ಲಿಪಿಯನ್ನು ಹೋಲುತ್ತದೆ.

    ಈ ಶಾಸನದಲ್ಲಿ 10 ಸಾಲುಗಳನ್ನು ಬರೆಯಲಾಗಿದೆ. ಸುಮಾರು ಮೂರು ಅಡಿ ಎತ್ತರ ಎರಡು ಅಡಿ ಅಗಲ ಹೊಂದಿರುವ ಶಾಸನವು ಗ್ರಾನೈಟ್ ಕಲ್ಲಿನಿಂದ ಕೊರೆಯಲ್ಪಟ್ಟಿದೆ. ಈ ಶಾಸನದಲ್ಲಿ ಶಕ ವರುಷ1331ನೇ ಮಾರ್ಗಶಿರ ಶುದ್ಧ೧ ಗುರುವಾರ ಅಂದರೆ ಇತಿಹಾಸ ಸಂಶೊಧಕರ ಲೆಕ್ಕಾಚಾರದ ಪ್ರಕಾರ 1409ನೇ ಇಸವಿಯ ವಿರೋಧಿ ಸಂವತ್ಸರದ ನವೆಂಬರ್ 7 ಗುರುವಾರದ ದಿನಕ್ಕೆ ಸರಿಹೊಂದುತ್ತದೆ.

    ಈ ಶಾಸನದಲ್ಲಿ ಮಂಣ್ಣೆ( ಪ್ರಸ್ತುತ ಮರ್ಣೆ ಗ್ರಾಮ)ಯ ಆಜಕಾರ ವಿಷ್ಣು ದೇವರ ದೀವಿಗೆಗೆ ಕಾತು ಮೂಲಿಗ(ಮೊಯ್ಲಿ ಸಮುದಾಯ ಇರಬಹುದು) ಎಂಬವರು ಬೆಟ್ಟಿಂ ಪ್ರದೇಶದಿಂದ (ಗಾಣದಬೆಟ್ಟು) ಎಣ್ಣೆಯನ್ನು ಮತ್ತು 11 ತೆಂಗಿನಕಾಯಿಗಳನ್ನು ದಾನವಾಗಿ(ಉಂಬಳಿ) ಬಿಟ್ಟಿರುವ ಕುರಿತು ಶಾಸನದಲ್ಲಿ ಉಲೇಖವಾಗಿದೆ. ಈ ಶಾಸನವು ಪತ್ತೆಯಾಗಿರುವ ಸಮೀಪದಲ್ಲಿ ಪುರಾತನ ವಿಷ್ಣುಮೂರ್ತಿ ದೇವಸ್ಥಾನವಿದ್ದು ಶಾಸನದಲ್ಲಿ ದೇವಸ್ಥಾನದ ಉಲ್ಲೇಖವಿದ್ದು ಭಾರೀ ಮಹತ್ವ ಪಡೆದುಕೊಂಡಿದೆ.

    Post Views: 290

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.