Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ಸೇತುವೆ ಬಳಿ ಬೈಕ್‌ ಇಟ್ಟು ನಾಪತ್ತೆ ನಾಟಕವಾಡಿದ್ದ ಯುವಕ ಪತ್ತೆ
    ಇತ್ತೀಚಿನ ಸುದ್ದಿ

    ಮಲ್ಪೆ: ಸೇತುವೆ ಬಳಿ ಬೈಕ್‌ ಇಟ್ಟು ನಾಪತ್ತೆ ನಾಟಕವಾಡಿದ್ದ ಯುವಕ ಪತ್ತೆ

    September 28, 2022
    Share

    ಮಲ್ಪೆ: ಮಲ್ಪೆ ಪಡುಕರೆ ಸೇತುವೆ ಬಳಿ ಬೈಕ್‌, ಚಪ್ಪಲಿ ಇರಿಸಿ, ನೀರಿಗೆ ಬಿದ್ದು ಕಣ್ಮರೆಯಾದ ನಾಟಕವಾಡಿದ ದಾವಣಗೆರೆಯ ಯುವಕ ಶಿವಪ್ಪ ನಾಯ್ಕ ಸೋಮವಾರ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ.

    ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ಪೊಲೀಸರ ಹಾದಿ ತಪ್ಪಿಸಲು ನೀರಿನಲ್ಲಿ ಮುಳುಗಿ ನಾಪತ್ತೆ ನಾಟಕವಾಡಿದ್ದ ಎನ್ನಲಾಗಿದೆ.

    ಇದೀಗ ಪೋಲೀಸರು ಆತನನ್ನು ಪತ್ತೆ ಹಚ್ಚಿ ಸೋಮವಾರ ಮಲ್ಪೆ ಪೊಲೀಸ್‌ ಠಾಣೆಗೆ ಕರೆ ತಂದಿದ್ದಾರೆ.

    6 ತಿಂಗಳ ಹಿಂದೆ ದಾವಣಗೆರೆಯ ಉತ್ಕಟಿ ತಾಂಡದ ಆಶಾ ಅವರನ್ನು ಪ್ರೀತಿಸಿ ಮದುವೆಯಾಗಿ ಮಲ್ಪೆ ಕೊಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮೀನು ಹೋರುವ ಕೆಲಸ ಮಾಡಿಕೊಂಡಿದ್ದು, ಇದರ ಮಧ್ಯೆ ಹೊಸಪೇಟೆ ಹರಪ್ಪನಹಳ್ಳಿಯ ಕಮಲಿಯೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದ. ಇದೇ ವಿಚಾರದಲ್ಲಿ ಕೆಲವು ದಿನಗಳಿಂದ ಕಟ್ಟಿ ಕೊಂಡ ಹೆಂಡತಿಯೊಂದಿಗೆ ವೈಮನಸ್ಸು ಹೊಂದಿ ಜಗಳಕ್ಕೂ ಕಾರಣವಾಗಿತ್ತು. ಕಮಲಿಯೂ ಕೂಡ ಮೀನುಗಾರಿಕೆ ಬಂದರಿನಲ್ಲಿ ಕೆಲಸ ಮಾಡುತ್ತಿದ್ದಳು.

    ಈಶ್ವರ್‌ ಮಲ್ಪೆಯಿಂದ
    ಹೊಳೆಯಲ್ಲಿ ಹುಡುಕಾಟ
    ಸೆ. 23ರಂದು ಆತನ ಬೈಕ್‌ ಮತ್ತು ಚಪ್ಪಲಿಯು ಸೇತುವೆಯ ತಡೆಗೋಡೆಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈತ ಸೇತುವೆ ಕೆಳಗೆ ಬಿದ್ದಿದ್ದಾನೆ ಎಂಬ ಶಂಕೆಯಿಂದ ಪೊಲೀಸರ ವಿನಂತಿಯ ಮೇರೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಸ್ಕೂಬಾ ಧರಿಸಿ ಸುಮಾರು ಒಂದು ತಾಸು ನೀರಿನಲ್ಲಿ ಜಾಲಾಡಿದರೂ ಪತ್ತೆಯಾಗಲಿಲ್ಲ.

    ಅನುಮಾನಗೊಂಡ ಪೊಲೀಸರು ತನಿಖೆಯನ್ನು ಮುಂದುವರಿಸಿ, ಆತನ ಮೊಬೈಲ್‌ ಆನ್‌ ಮಾಡಿದಾಗ ಕುಂಜಿಬೆಟ್ಟಿನ ಬ್ಯಾಂಕಿನಿಂದ 24 ಸಾವಿರ ರೂ. ಡ್ರಾ ಮಾಡಿದ ಮೆಸೇಜ್‌ ಬಂದಿತ್ತು. ಇದರ ಆಧಾರದಲ್ಲಿ ಆತ ಜೀವಂತ ಇದ್ದಾನೆಂದು ಪೊಲೀಸರಿಗೆ ತಿಳಿಯಿತು. ಆತನ ಇರುವಿಕೆಯನ್ನು ಸಂಬಂಧಿಕರ ನೆರವಿನಿಂದ ಮಾಹಿತಿ ಪಡೆದು ಆತನನ್ನು ಊರಿನಿಂದ ಇಲ್ಲಿಗೆ ಕರೆಸಿಕೊಳ್ಳಲಾಯಿತು.

    ಹಾದಿ ತಪ್ಪಿಸಲು ಆಡಿದ್ದ ನಾಟಕ
    ಆತನನ್ನು ಕರೆಸಿದ ಮಲ್ಪೆ ಪೊಲೀಸರು ವಿಚಾರಣೆ ನಡೆಸುವ ವೇಳೆ ತಾನು ಮಾಡಿದ್ದೆಲ್ಲವನ್ನು ಆತ ಬಾಯ್ಬಿಟ್ಟಿದ್ದಾನೆ. ಬೈಕ್‌ ಅಪಘಾತವಾಗಿ ಸೇತುವೆಯಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ಬಿಂಬಿಸಿದ್ದಾನೆ. ಸೇತುವೆಯಲ್ಲಿ ಬೈಕ್‌ನ ಬ್ರೇಕ್‌ ಒತ್ತಿ, ಎಕ್ಸಲೇಟರ್‌ ಜಾಸ್ತಿ ಮಾಡಿ ಒಮ್ಮೆಲೆ ಬಿಟ್ಟಾಗ ಅದು ಸೇತುವೆ ತಡೆಗೋಡೆಗೆ ತಾಗಿ ಅಪಘಾತ ನಡೆದಂತೆ ಬಿಂಬಿಸಿ, ಆ ಬಳಿಕ ಕೋಳಿಯನ್ನು ಕೊಯ್ದು ಅದರ ರಕ್ತವನ್ನು ರಸ್ತೆ ಮೇಲೆ ಹರಿಸಿ ಅಪಘಾತವಾಗಿ ತಾನು ಹೊಳೆಗೆ ಎಸೆಯಲ್ಪಟ್ಟಿದ್ದೇನೆ ಎಂಬ ನಾಟಕವಾಡಿದ. ಒಂದು ಕಾಲಿನ ಮೆಟ್ಟು ಮತ್ತು ಮೊಬೈಲನ್ನು ಅಲ್ಲೇ ಬಿಟ್ಟಿದ್ದಾನೆ. ಆ ಬಳಿಕ ಉಡುಪಿಯ ಲಾಡ್ಜ್ನಲ್ಲಿ ಇದ್ದು ಅಂದು ರಾತ್ರಿ ಊರಿಗೆ ತೆರಳಿ ಸಂಬಂಧಿಕರ ಮನೆಯಲ್ಲಿ ತಂಗಿದ್ದೆನೆಂದು ಹೇಳಿದ್ದಾನೆ. ಇದೆಲ್ಲ ಜನರ ಹಾದಿ ತಪ್ಪಿಸಲು ಈತ ಮಾಡಿದ ನಾಟಕ ಎಂದು ಒಪ್ಪಿಕೊಂಡಿದ್ದಾನೆ. ಪೊಲೀಸರು ಈತನಿಗೆ ಮೊದಲ ಹೆಂಡತಿ ಜತೆ ಸಂಸಾರ ನಡೆಸುವಂತೆ ಬುದ್ದಿವಾದ ಹೇಳಿ ಕಳುಹಿಸಿಕೊಟ್ಟಿದ್ದಾರೆ.

    Post Views: 195

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.