Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ನನ್ನ ನಾಡು ನನ್ನ ಹಾಡು’ : ಅ. 28ರಂದು ‘ಕೋಟಿ ಕಂಠ ಗಾಯನ’ ಆಯೋಜನೆ
    ಇತ್ತೀಚಿನ ಸುದ್ದಿ

    ‘ನನ್ನ ನಾಡು ನನ್ನ ಹಾಡು’ : ಅ. 28ರಂದು ‘ಕೋಟಿ ಕಂಠ ಗಾಯನ’ ಆಯೋಜನೆ

    October 27, 2022
    Share

    ಬೆಂಗಳೂರು:ನವೆಂಬರ್ 1 ಕನ್ನಡ ರಾಜ್ಯೋತ್ಸವ ನಿಮಿತ್ತ, ಅಕ್ಟೋಬರ್ 28ರಂದು ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಕ್ಯೂಆರ್ ಕೋಡ್ ಮೂಲಕ 1.10 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ನನ್ನ ನಾಡು ನನ್ನ ಹಾಡು ಘೋಷಣೆಯೊಂದಿಗೆ ಗಾಯನ ನಡೆಯಲಿದೆ ಎಂದರು.

    ರಾಜ್ಯ ಸರ್ಕಾರದಿಂದ ಅಕ್ಟೋಬರ್ 28, 2022ರಂದು ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಾಧಿಯಾಗಿ ಎಲ್ಲಿರಿಗೂ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು. ಇದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. 46 ದೇಶ, 26 ರಾಜ್ಯಗಳಿಂದ 1.10 ಕೋಟಿ ಜನರು ಕಾರ್ಯಕ್ರಮದಲ್ಲಿ ಹಾಡೋದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ.

    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರು, ನನ್ನ ನಾಡು, ನನ್ನ ಹಾಡು ಕಾರ್ಯಕ್ರಮವನ್ನು ಅಕ್ಟೋಬರ್ 28ರಂದು ಆಯೋಜಿಸಲಾಗಿದೆ. ಕೋಠಿ ಕಂಠ ಗಾಯನ ಕಾರ್ಯಕ್ರಮಕ್ಕೆ ಕ್ಯೂ ಆರ್ ಕೋಡ್ ಮೂಲಕ 1.10 ಕೋಟಿ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

    ಕೋಟಿ ಕಂಠ ಗಾಯನ ಕಾರ್ಯಕ್ರಮವು ಕನ್ನಡ ಭಾಷೆ, ಜನರ ಮನಸ್ಸನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ. ಈ ಪ್ರಯತ್ನಕ್ಕೆ 46 ದೇಶಗಳು, 26 ರಾಜ್ಯಗಳಿಂದ ಜನರು ನೋಂದಣಿ ಮಾಡಿಕೊಂಡಿದ್ದಾರೆ. 10 ಸಾವಿರ ಸ್ಥಳಗಳಲ್ಲಿ ಒಂದು ಕೋಟಿ ಜನರು ಏಕಕಾಲಕ್ಕೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಡಲಿದ್ದಾರೆ. ಶಿಕ್ಷಣ, ಉನ್ನತ ಶಿಕ್ಷಣ, ಕಾರ್ಮಿಕ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳು ಕೂಡ ಕೈಜೋಜಿಸಿವೆ ಎಂದರು.

    ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 28ರಂದು ನಡೆಯಲಿರುವಂತ ಗಾಯನ ಕಾರ್ಯಕ್ರಮದಲ್ಲಿ 50 ಸಾವಿರ ಜನರು ಒಟ್ಟಿಗೆ ಹಾಡಲಿದ್ದಾರೆ. ಕಾರ್ಖಾನೆ, ಆಸ್ಪತ್ರೆ, ರಿಕ್ಷಾ ನಿಲ್ದಾಣ, ಅಪಾರ್ಮೆಂಟ್, ವಿಧಾನಸೌಧ, ಮೈಸೂರು ಅರಮನೆ, ಚಿತ್ರದುರ್ಗ ಕೋಟೆ, ಬೀದರ್ ಗುರುದ್ವಾರ, ಬಾದಾಮಿ, ಜೋಗ ಜಲಪಾತ, ಸಮುದ್ರ ಕಿನಾರೆ, ಏರ್ ಪೋರ್ಟ್ ಸೇರಿ ಎಲ್ಲಾ ಕಡೆ ನಡೆಯಲಿದೆ ಎಂಬುದಾಗಿ ಸಚಿವ ಸುನೀಲ್ ಕುಮಾರ್ ತಿಳಿಸಿದರು.

    Post Views: 294

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.