Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶ
    ಇತ್ತೀಚಿನ ಸುದ್ದಿ

    ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ : ಯಾತ್ರಿಗಳಿಗೆ ʼಕ್ಯೂ ಮೂಲಕ ಮಾತ್ರವೇ ಪ್ರವೇಶ

    November 16, 2022
    Share

    ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ.

    ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ.

    ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು.

    ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.

    ಕೊವಿಡ್-19ರ ನಿರ್ಬಂಧದ ಕಾರಣ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿತ್ತು.

    ಈ ಬಾರಿ ನಿರ್ಬಂಧ ಸಡಿಲಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಶಬರಿಮಲೆ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುಮಾರು 13,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

    Post Views: 308

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.