Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ‘ಹೊನ್ನಾಳಿ ಚಂದ್ರಶೇಖರ್’ ಸಾವಿನ ಪ್ರಕರಣಕ್ಕೆ ಬಿಗ್‍ ಟ್ವಿಸ್ಟ್ : ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸತ್ಯ ಬಯಲು..!
    ಇತ್ತೀಚಿನ ಸುದ್ದಿ

    BREAKING NEWS: ‘ಹೊನ್ನಾಳಿ ಚಂದ್ರಶೇಖರ್’ ಸಾವಿನ ಪ್ರಕರಣಕ್ಕೆ ಬಿಗ್‍ ಟ್ವಿಸ್ಟ್ : ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸತ್ಯ ಬಯಲು..!

    November 16, 2022
    Share

    ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇನ್ನೂ ಪ್ರಕರಣ ತಾರ್ಕಿಕ ಅಂತ್ಯ ಕಂಡುಕೊಂಡಿಲ್ಲ.

    ಇದರ ನಡುವೆ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಚಂದ್ರಶೇಖರ್ ಸಾವಿನ ಬಗ್ಗೆ ಉಲ್ಲೇಖಿಸಲಾಗಿದೆ.ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಚಾರ್ಯ ಕುಟುಂಬ ಆರೋಪಿಸಿದಂತೆ ಹಲ್ಲೆ ನಡೆದಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧದ ಕಲೆಗಳಿಲ್ಲ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

    ಚಂದ್ರು ಕೈಗೆ ಹಗ್ಗದಿಂದ ಕಟ್ಟಿದ ಯಾವುದೇ ಗುರುತು ಇಲ್ಲ, ತಲೆಗೆ ಹಿಂದಿನಿಂದ ಹಲ್ಲೆ ಮಾಡಿದ ಯಾವುದೇ ಗುರುತು ಇಲ್ಲ, ದೇಹದ ಮೇಲೆ ಯಾವುದೇ ಆಯುಧಗಳಿಂದ ಹಲ್ಲೆ ಮಾಡಿಲ್ಲ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಇನ್ನೂ, ಚಂದ್ರಶೇಖರ್ ಗೆ ಏನಾದರೂ ಇಂಜೆಕ್ಟ್ ಮಾಡಿದ್ದಾರಾ ಎಂಬುದರ ಬಗ್ಗೆ ಪರೀಕ್ಷೆ ನಡೆಸಲಾಗುತ್ತದೆ.

    ಇನ್ನೂ, ಎಫ್‌ಎಸ್‌ಎಲ್ ವರದಿ ಪ್ರಕಾರ ಕಾರು ವೇಗವಾದ ಸ್ಪೀಡ್ನಿಂದ ಡಿಕ್ಕಿ ಹೊಡೆದು ನೀರಿಗೆ ಬಿದ್ದಿದೆ ಎನ್ನಲಾಗಿದೆ. ಖಾಸಗಿ ವಿಧಿ ವಿಜ್ಞಾನ ತಜ್ಞ ಫಣೀಂದ್ರ ಕೂಡ 40 ಪುಟಗಳ ವರದಿಯನ್ನು ನೀಡಿದ್ದಾರೆ. ವರದಿಯ ಪ್ರಕಾರ ಅಪಘಾತ ಸಂಭವಿಸಿದೆ ಎಂದು ವರದಿ ನೀಡಿದ್ದಾರೆ. ಇನ್ನು ಒಂದು ಹಂತದ ಪರೀಕ್ಷೆ ಬಾಕಿ ಇದೆ ಎಂದು ಫಣೀಂದ್ರ ಹೇಳಿದ್ದಾರೆ ಎನ್ನಲಾಗಿದೆ.

    ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಎಂದು ರೇಣುಕಾಚಾರ್ಯ ಹಾಗೂ ಮೃತ ಚಂದ್ರು ತಂದೆ ರಮೇಶ್ ಗಂಭೀರವಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನೂ, ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ ಎಂದು ಮೃತ ಚಂದ್ರಶೇಖರ್ ತಂದೆ ರಮೇಶ್ ಹಾಗೂ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದರು.

    Post Views: 220

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.