Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟೋಕನ್ ಇಲ್ಲದೆ ಪಡಿತರ ವಿತರಣೆ: ಪ್ರಶ್ನಿಸಿದ ದಲಿತ ಯುವಕನನ್ನು ನಿಂದಿಸಿ, ಹಲ್ಲೆಗೆ ಯತ್ನ
    ಇತ್ತೀಚಿನ ಸುದ್ದಿ

    ಟೋಕನ್ ಇಲ್ಲದೆ ಪಡಿತರ ವಿತರಣೆ: ಪ್ರಶ್ನಿಸಿದ ದಲಿತ ಯುವಕನನ್ನು ನಿಂದಿಸಿ, ಹಲ್ಲೆಗೆ ಯತ್ನ

    November 25, 2022
    Share

    ಉಡುಪಿ: ಟೋಕನ್ ಇಲ್ಲದೆ ಪಡಿತರ ನೀಡಿದ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿರುವ ಘಟನೆ ಸಹಕಾರಿ ವ್ಯವಸಾಯ ಬ್ಯಾಂಕ್‌ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಚೇರಿಯಲ್ಲಿ ನಡೆದಿದೆ.

    ಅಂಬಾಗಿಲು ನಿವಾಸಿ ಸತೀಶ್ ವಿ. ಎಂಬವರು ನ. 21ರಂದು ಬೆಳಿಗ್ಗೆ ಉಡುಪಿ ತಾಲೂಕಿನ ಸಹಕಾರಿ ವ್ಯವಸಾಯ ಬ್ಯಾಂಕ್‌ ಹೆರ್ಗ ಇದರ ಅಂಬಾಗಿಲುವಿನ ಶಾಖಾ ಕಛೇರಿಗೆ ಪ್ರತಿ ತಿಂಗಳಂತೆ ತಮ್ಮ ಕಾರ್ಡ್ ನ ಪಡಿತರ ತರಲು ಹೋಗಿದ್ದರು. ಆಗ ಅಂಗಡಿಯಲ್ಲಿ ಈಗ ಸಮಯವಿಲ್ಲ ಸಂಜೆ ಬನ್ನಿ ಎಂದು ಹೇಳಿದ್ದರು.

    ಅದರಂತೆ ಸತೀಶ್ ವಿ. ಅವರು  ಸಂಜೆ 4:15ಕ್ಕೆ ಅಂಗಡಿಗೆ ಹೋದಾಗ ಗ್ರಾಹಕರೊಬ್ಬರಿಗೆ ಟೋಕನ್‌ ನೀಡದೇ ಪಡಿತರ ಕೊಡುತ್ತಿದ್ದರು. ಅದನ್ನು ಗಮನಿಸಿದ ಸತೀಶ್ ಅವರು ಯಾಕೆ ನಂತರ ಬಂದಿರುವವರಿಗೆ ಟೋಕನ್‌ ಇಲ್ಲದೇ ಪಡಿತರ ಕೊಡುತ್ತೀರಿ. ಅವರು ಸಾಲಿನಲ್ಲಿ ನಿಲ್ಲಬೇಕಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ.

    ಈ ವೇಳೆ ಅಂಗಡಿಯಿಂದ ಹೊರಬಂದ ಸಚ್ಚೇಂದ್ರ ನಾಯಕ್ ಎಂಬಾತನು ಸತೀಶ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಎರಡನೇ ಆರೋಪಿ ಅಶ್ವಿನಿ ಶೆಟ್ಟಿ ಕೂಡಾ ಹೊರಗೆ ಬಂದು  ಸತೀಶ್ ಅವರ ರೇಶನ್‌ ಕಾರ್ಡ್‌ ನ್ನು ಕಸಿದುಕೊಂಡು ಮುಖಕ್ಕೆ ಎಸೆದು  ಸಾರ್ವಜನಿಕರವಾಗಿ ಹಿಯಾಳಿಸಿ ಬೈದು ಅವಮಾನ ಮಾಡಿದ್ದಾರೆ ಎನ್ನಲಾಗಿದೆ.

    ಈ ಬಗ್ಗೆ ಸತೀಶ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಗುರುವಾರ ಅಂಡಿಗೆ ತೆರಳಿ ಮಹಜರು ಪ್ರಕ್ರಿಯೆ ನಡೆಸಿದರು.

    Post Views: 169

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.