Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಆಟೋ ಚಾಲಕನ ಸಾವು ಪ್ರಕರಣಕ್ಕೆ ಟ್ವಿಸ್ಟ್: ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ..?
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಆಟೋ ಚಾಲಕನ ಸಾವು ಪ್ರಕರಣಕ್ಕೆ ಟ್ವಿಸ್ಟ್: ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ..?

    December 1, 2022
    Share

    ಬೆಳ್ತಂಗಡಿ: ರಿಕ್ಷಾ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದ್ದು ತನ್ನ ಪತಿಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ?

    ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಮಂಗಳವಾರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ. ಆತ ಮನೆಗೆ ಬಾರದಿದ್ದಾಗ ಪತ್ನಿ ಕರೆಮಾಡಿದಾಗ ರಾತ್ರಿ 1:39ಕ್ಕೆ ತಾನು ಮನೆಗೆ ಬರುತ್ತೇನೆ ಎಂದು ತಿಳಿಸಿದ್ದರು. ಆದರೆ ಮನೆಗೆ ಹಿಂದಿರುಗಿರಲಿಲ್ಲ ಬಳಿಕ ಬುಧವಾರ ಬೆಳಿಗ್ಗೆ ಪ್ರವೀಣನ ಡ್ರೈವಿಂಗ್ ಲೈಸನ್ಸ್ ಹಾಗೂ ದಾಖಲೆಗಳು ಕೆರೆಯ ಸಮೀಪ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

    ಮೆಹಂದಿ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದು ಬಂದಿರುವುದಾಗಿಯೂ ರಾತ್ರಿ 3 ಗಂಟೆಯ ಸುಮಾರಿಗೆ ತಮ್ಮ ಮನೆಯ ಸಮೀಪ ಕಾರೊಂದು ಬಂದು ಹೋಗಿರುವುದಾಗಿಯೂ ಮೃತದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟೀ ಶರ್ಟ್ ಇರಲಿಲ್ಲ ಎಂದೂ ಇದರಿಂದಾಗಿ ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ಕ್ರಮ ಕೈಗೊಳ್ಖುವಂತೆ ಮೃತನ ಪತ್ನಿ ರೇಷ್ಮಾ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

    ಪೊಲೀಸರಿಂದ ತನಿಖೆ ಆರಂಭ:

    ಈ ದೂರಿನ ಆಧಾರದಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಆರಂಭದಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣ ಎಂಬ ಮಾಹಿತಿಗಳು ಹೊರ ಬಂದಿತ್ತು. ಸ್ನೇಹಿತರಿಗೆ ಕರೆ ಮಾಡಿ ಹೇಳಿದ್ದ ಎಂದೂ ಹೇಳಲಾಗಿತ್ತು ಆದರೆ ಇದೀಗ ಪ್ರಕರಣದ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಲಾರಂಭಿಸಿದೆ.

    ಮೆಹಂದಿ ಮನೆಯಲ್ಲಿ ಏನು ಸಂಭವಿಸಿದೆ ಎಂಬ ವಿಚಾರದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರವೀಣ್ ಮೇಲೆ ಹಲ್ಲೆ ನಡೆಸಿದವರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬೆಳಗ್ಗಿನ ಜಾವ ಪ್ರವೀಣ್ ರವರ ಮನೆ ಸಮೀಪ ಬಂದ ಕಾರು ಯಾರದು ಯಾಕಾಗಿ ಬಂದಿದ್ದಾರೆ ಎಂಬುದು ಮತ್ತೊಂದು ಪ್ರಶ್ನೆಯಾಗಿ ಮಾರ್ಪಟ್ಟಿದೆ.

    ಪೊಲೀಸರು ಈ ಎಲ್ಲಾ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಇದೀಗ ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದ್ದು ಇದರಿಂದ ಹೆಚ್ಚಿನ ಮಾಹಿತಿಗಳು ಲಭಿಸುವ ನಿರೀಕ್ಷೆಯಿದೆ.

    Post Views: 186

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.