Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪರ ವಕಾಲತ್ತು ಮಾಡಬೇಡಿ ; ವಕೀಲರ ಸಂಘಕ್ಕೆ ಬಜರಂಗದಳ ಮನವಿ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪರ ವಕಾಲತ್ತು ಮಾಡಬೇಡಿ ; ವಕೀಲರ ಸಂಘಕ್ಕೆ ಬಜರಂಗದಳ ಮನವಿ

    December 2, 2022
    Share

    ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ.

    ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್‌ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹಲವು ಮೂಲಗಳಿಂದ ಮತ್ತು ಪತ್ರಿಕೆಗಳಲ್ಲಿನ ಮಾಹಿತಿಯಿಂದ ಶಾರೀಕ್ ಐಸಿಸ್ ನಂತಹ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದ್ದನು ಎಂಬ ವಿಚಾರವು ನಮ್ಮ ಗಮನಕ್ಕೆ ಬಂದಿರುತ್ತದೆ.ಇಂತಹ ಸನ್ನಿವೇಶಗಳಿಂದ ನಮ್ಮ ನಾಗರಿಕರಿಗೆ ಅಭದ್ರತೆಯ ಕೊರತೆ ಎದ್ದುಕಾಣುತ್ತಿದೆ.ಹಾಗೆಯೆ ಸಮಾಜದಲ್ಲಿನ ಶಾಂತಿಯನ್ನು ಹಾಳುಮಾಡುವ ಉದ್ದೇಶ ಮತ್ತು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದೆ ಇರುವುದು ಇಂತಹ ಕೃತ್ಯಗಳು ಮರುಕಳಿಸುವಂತಾಗಿದೆ. ಆದ್ದರಿಂದ, ಸಮಾಜದಲ್ಲಿ ಶಾಂತಿ ಕದಡುವ ಹಾಗು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದ ಮತ್ತು ಭಯೋತ್ಪಾದನೆಯಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪಿ ಪರವಾಗಿ ಮಾನ್ಯ ನ್ಯಾಯಾಲಯದಲ್ಲಿ ಸಂಘದ ಪದಾಧಿಕಾರಿಗಳೇ ಆಗಲಿ ಅಥವಾ ಸದದಸ್ಯರುಗಳೇ ಆಗಲಿ ಅಥವಾ ಇನ್ಯಾವುದೇ ಜಿಲ್ಲೆಯ ನ್ಯಾಯವಾದಿಗಳೇ ಆಗಲಿ ಆರೋಪಿಯ ಪರ ವಕಾಲತ್ತು ನಡೆಸದಾಗಿ ಕರೆ ನೀಡಬೇಕು. ಈ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವಂತಹ ತಾವುಗಳು ಸಮಾಜಘಾತುಕರ ವಿರುದ್ಧ ಕಾನೂನು ಸಮರಕ್ಕೆ ಸಹಕಾರ ನೀಡಬೇಕೆಂದು ಎಂದು ಬಜರಂಗದಳ ಮನವಿ ಮಾಡಿದೆ.

    Post Views: 187

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.