Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಸಿರೋಡು‌ ನಿವಾಸಿ ಬಸ್ ಪ್ರಯಾಣಿಕನಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ
    ಇತ್ತೀಚಿನ ಸುದ್ದಿ

    ಬಿಸಿರೋಡು‌ ನಿವಾಸಿ ಬಸ್ ಪ್ರಯಾಣಿಕನಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

    December 15, 2022
    Share

    ಮೂಡಬಿದಿರೆ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಲ್ಲರಪಟ್ನ ನಿವಾಸಿ 45 ವರ್ಷದ ಇಸ್ಹಾಕ್ ಎಂಬವರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಯಿ ಎಂಬಲ್ಲಿ ನಡೆದಿದೆ. ಈಗ ಬಿಸಿರೋಡಿನಲ್ಲಿ ವಾಸವಿರುವ ಇಸ್ಹಾಕ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಬಿ.ಸಿ.ರೋಡ್ ನಿಂದ ಮೂಡುಬಿದಿರೆಗೆ ತೆರಳಲೆಂದು ಖಾಸಗಿ ಬಸ್ ಹತ್ತಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರ ದಟ್ಟಣೆಯಿದ್ದುರಿಂದ ಇಸ್ಹಾಕ್ ಕುಳಿತಿದ್ದ ಸೀಟಿನ ಬಳಿ ನಿಂತಿದ್ದ ಮಹಿಳೆಯೊಬ್ಬರು ಬ್ಯಾಗ್ ಹಿಡಿದುಕೊಳ್ಳುವಂತೆ ಇಸ್ಹಾಕ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.

    ಮಹಿಳೆ ತಾನು ಇಳಿಯುವ ಜಾಗ ತಲುಪಿದಾಗ ಇಸ್ಹಾಕ್ ಅವರಿಂದ ಬ್ಯಾಗ್ ಪಡೆದು ಬಸ್ಸಿನಿಂದ ಇಳಿದು ಹೋದರೆನ್ನಲಾಗಿದೆ. ಬಳಿಕ ಕಂಡೆಕ್ಟರ್ ಇಸ್ಹಾಕ್ ಅವರನ್ನು ಬಸ್ಸಿನಿಂದ ಕೆಳಗಿಳಿಸಿ ಅವರಿಗೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಕೆಲವು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಕೆಲವು ಯುವಕರನ್ನು ಕರೆಸಿ ಇಸ್ಹಾಕ್ ಅವರನ್ನು ಒಪ್ಪಿಸಿದ್ದಾನೆ.

    ಬಳಿ ಕದುಷ್ಕರ್ಮಿಗಳ ಗುಂಪು ಇಸ್ಹಾಕ್ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    ಹಲ್ಲೆಯಿಂದ ಇಸ್ಹಾಕ್ ಅವರ ಬೆನ್ನು, ಕೈ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಬಳಿಕ ಗುಂಪು ಇಸ್ಹಾಕ್ ಅವರನ್ನು ಗುಂಪು ಪೊಲೀಸರಿಗೆ ಹಸ್ತಾಂತರಿಸಿದೆ.ಪೊಲೀಸರು ಇಸ್ಹಾಕ್ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

    ವಿಷಯ ತಿಳಿದು ಇಸ್ಹಾಕ್ ಅವರ ಕುಟುಂಬದವರು ಠಾಣೆಗೆ ಬಂದಿದ್ದು, ಸಂಜೆ 5:30ರವರೆಗೆ ಇಸ್ಹಾಕ್ ಅವರನ್ನು ಠಾಣೆಯಲ್ಲೇ ಕೂರಿಸಲಾಗಿತ್ತು. ಬಳಿಕ ಇಸ್ಹಾಕ್ ಅವರಿಂದ ಹೇಳಿಕೆ ಪಡೆದು ಕುಟುಂಬದೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ವರದಿಯಾಗಿದೆ.

    ಇದೀಗ ಇಸ್ಹಾಕ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    Post Views: 186

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.