Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಜಮ್ಮು , ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಬಲಿ, ಹಲವರಿಗೆ ಗಾಯ
    ರಾಷ್ಟ್ರೀಯ ಸುದ್ದಿ

    ಜಮ್ಮು , ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಬಲಿ, ಹಲವರಿಗೆ ಗಾಯ

    January 2, 2023
    Share

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ನಾಗರಿಕರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಘಟನೆಯಲ್ಲಿ ಗಾಯಗೊಂಡ ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್ ಮತ್ತು ಪ್ರೀತಮ್ ಲಾಲ್ ಮತ್ತು ಶಿವಪಾಲ್‌ಎಂದು ಗುರುತಿಸಲಾಗಿದೆ.

    ನಿನ್ನೆ ಸಂಜೆ ಡಾಂಗ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರೆದಿದೆ.

    ನಿನ್ನೆ(ಭಾನುವಾರ) ಸಂಜೆ ಡಾಂಗ್ರಿ ಗ್ರಾಮದಲ್ಲಿ ಇಬ್ಬರು ಶಸ್ತ್ರಸಜ್ಜಿತ ಉಗ್ರರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಿಂದ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಪೊಲೀಸರು, ಭದ್ರತಾ ಪಡೆಗಳುಗ್ರಾಮಕ್ಕೆ ತೆರಳಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಿವೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

    ಈ ದಾಳಿ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದೆ. ಘಟನೆಯನ್ನು ವಿರೋಧಿಸಿ ಮತ್ತು ಶೀಘ್ರ ಕ್ರಮಕ್ಕೆ ಆಗ್ರಹಿಸಿ ಇಂದು ಹಲವು ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಬಂದ್ ಕರೆಗೆ ಬಿಜೆಪಿ ಬೆಂಬಲ ನೀಡಿದೆ.

    ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಎರಡನೇ ಘಟನೆ ಇದಾಗಿದೆ. ಡಿಸೆಂಬರ್ 16 ರಂದು ರಾಜೌರಿಯ ಸೇನಾ ಶಿಬಿರದ ಹೊರಗೆ ಇಬ್ಬರು ನಾಗರಿಕರು ಕೊಲ್ಲಲ್ಪಟ್ಟರು.

    3 people killed & 7 others injured in firing incident in Dangri area of Rajouri. Injured are being treated. Police & Dist administration have reached the spot. Multiple bullet injuries found on the body of injured: Dr Mehmood, Medical Superintendent, Associated Hospital, Rajouri https://t.co/obY9JP0NE6 pic.twitter.com/oG4VsXIWKH

    — ANI (@ANI) January 1, 2023

    Post Views: 228

    Related Posts

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.