Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಗಾಂಜಾ ದಂಧೆ- 10 ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು : ಗಾಂಜಾ ದಂಧೆ- 10 ಮಂದಿಯ ಬಂಧನ

    January 11, 2023
    Share

    ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ.

    ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

    ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

    ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26),ಚಂಡಿಘಡ,ಪಂಜಾಬ್ ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ.

    ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾನನ್ನ ಮೊದಲು ಬಂಧಿಸಲಾಗಿದೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಕಾರ್ಯಾಚರಣೆ ನಡೆಸಿ ಉಳಿಸವರನ್ನು ಪಿಜಿಗಳು, ಹಾಸ್ಟೆಲ್ ಮತ್ತು ಬಾಡಿಗೆ ಮನೆಗಳಿಂದ ಬಂಧಿಸಲಾಗಿದೆ.

    ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

    Post Views: 174

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.