Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಿಸ್ ಮಂಗಳೂರು ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ
    ಇತ್ತೀಚಿನ ಸುದ್ದಿ

    ಮಿಸ್ ಮಂಗಳೂರು ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ

    January 17, 2023
    Share

    ಕೊಟ್ಟಿಗೆಹಾರ: ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ.

    ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ವಿದ್ಯಾರ್ಥಿನಿ ಸುಷ್ಮಾ ಹಲವು ಕನಸುಗಳನ್ನು ಕಂಡಾಕೆ.

    ಪಿಯುಸಿ ವ್ಯಾಸಂಗವನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ಮುಗಿಸಿದ್ದಾರೆ. ಇವರಿಗೆ ವಿದ್ಯಾಭ್ಯಾಸದೊಂದಿಗೆ ನೃತ್ಯ, ಭರತನಾಟ್ಯ, ಮಾಡೆಲಿಂಗ್, ಆಂಕರಿಂಗ್, ಭಾಷಣ ಕಲೆಯಲ್ಲಿ ತುಂಬಾ ಆಸಕ್ತಿ ಹೊಂದಿದ್ದಾರೆ. ಅದರೊಂದಿಗೆ ಕೆಡೆಟ್ ಎನ್.ಸಿ.ಸಿ. ಏರ್ ವಿಂಗ್ ನಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. ಶಾಲಾ ಹಂತದಲ್ಲಿ ನೃತ್ಯ ಸ್ಪರ್ಧೆಗಳಲ್ಲಿ ಹಲವು ಬಹುಮಾನಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಕಲಿಕೆಯಲ್ಲೂ ಮುಂದಿದ್ದ ಸುಷ್ಮಾ ಹಲವು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡ ಪ್ರತಿಭೆ.

    ಸಂತ ಆಗ್ನೇಸ್ ಕಾಲೇಜಿನಲ್ಲಿ ಬಿಬಿಎ ಮುಗಿಸಿದರು. ಶ್ರೀದೇವಿ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಿಜಿ ಕೆಂಜಾರು ಕಾಲೇಜಿನಲ್ಲಿ ಎಂಬಿಎ ಪದವಿ ಮುಗಿಸಿದ ಇವರಿಗೆ ಏನಾದರೂ ಜೀವನದಲ್ಲಿ ಸಾಧಿಸಬೇಕೆಂಬ ಛಲ ಮನೆ ಮಾಡಿತ್ತು.

    ಇವರ ತಂದೆ ಬಿ.ಸುರೇಶ್ ಶೆಟ್ಟಿ ಬಣಕಲ್ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಹಾಗೂ ಉತ್ತಮ ಚತುರತೆಯ ವಾಗ್ಮಿ. ಅವರ ತಾಯಿ ಸೌಮ್ಯ ಎಸ್.ಶೆಟ್ಟಿ ಗೃಹಿಣಿಯಾಗಿದ್ದು ಜೆಸಿರೇಟ್ ಸದಸ್ಯರೂ ಆಗಿದ್ದು, ಈ ದಂಪತಿಗಳ ಸಹಕಾರ ಪುತ್ರಿಯ ಸಾಧನೆಗೆ ಕೈಗನ್ನಡಿಯಾಯಿತು.

    ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಹೆವೆನ್ ರೋಜ್ ಆಂಡ್ ಸಿಜ್ಲಿಂಗ್ ಗೈಸ್ ಪ್ರಾಯೋಜಕತ್ವದಲ್ಲಿ ಏರ್ಪಡಿಸಿದ್ದ ಮಿಸ್ ಸ್ಪರ್ದೆಯಲ್ಲಿ ನೂರು ಸ್ಪರ್ಧಾಳುಗಳು ಭಾಗವಹಿಸಿದ್ದರು. ಅದರಲ್ಲಿ ಅಂತಿಮ ಆಯ್ಕೆ ಸುತ್ತಿಗೆ 36 ಸ್ಪರ್ಧಿಗಳು ಆಯ್ಕೆಯಾದರು. ಅದರಲ್ಲಿ ಕೊನೆಯ ಸುತ್ತಿನ 10 ಮಂದಿಯಲ್ಲಿ ಸುಷ್ಮಾ ಆಯ್ಕೆಯಾಗಿ ‘ಮಿಸ್ ಮಂಗಳೂರು’ ಪಟ್ಟವನ್ನು ಅಲಂಕರಿಸಿಕೊಂಡರು.

    ಕಾಫಿನಾಡಿನ ಈ ಪ್ರತಿಭೆಗೆ ಮಿಸ್ ಮಂಗಳೂರು ಪಟ್ಟ ಒಲಿದು ಬಂದಿರುವುದು ನಾಡಿಗೆ ಹೆಮ್ಮೆಯ ಪ್ರತೀಕವಾಗಿದೆ. ಹಲವು ಕನಸು ಕಂಡಿರುವ ಸುಷ್ಮಾಗೆ ಇನ್ನಷ್ಟು ಸಾಧನೆ ಮಾಡುವ ಅವಕಾಶ ಸಿಗಲಿ ಎಂಬುದು ಅಭಿಮಾನಿಗಳ ಹಾರೈಕೆಯಾಗಿದೆ.

    Post Views: 206

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.