Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ರಾಜ್ಯಾಧ್ಯಂತ ‘ಕ್ಷ-ಕಿರಣ ಸೇವೆ’ ಸ್ಥಗಿತ.?
    ಇತ್ತೀಚಿನ ಸುದ್ದಿ

    BIG NEWS: ರಾಜ್ಯಾಧ್ಯಂತ ‘ಕ್ಷ-ಕಿರಣ ಸೇವೆ’ ಸ್ಥಗಿತ.?

    January 25, 2023
    Share

    ಬೆಂಗಳೂರು: ರಾಜ್ಯಾದ್ಯಂತ ಕ್ಷ ಕಿರಣ ಸೇವೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಏಕೆಂದರೆ, ಆರೋಗ್ಯ ಇಲಾಖೆಯ ಕ್ಷ ಕಿರಣ ವಿಕಿರಣ ಸುರಕ್ಷತಾ ನಿರ್ದೇಶನಾಲಯದ ನಿರ್ದೇಶಕರ ಹುದ್ದೆಗೆ ಅರ್ಹತೆ ಹೊಂದಿಲ್ಲದ ಅಧಿಕಾರಿಯನ್ನು ನಿಯೋಜಿಸಿರುವುದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

    ಕೇಂದ್ರ ಸರ್ಕಾರದ ಪರಮಾಣು ಶಕ್ತಿ ನಿಯಂತ್ರಣ ಮಂಡಳಿಯ(ಎಇಆರ್‌ಬಿ) ನಿಯಮಗಳನ್ನು ಗಾಳಿಗೆ ತೂರಿ ಅನರ್ಹತೆ ಹೊಂದಿರುವ ಡಾ.ಎನ್.ರವಿ ಎಂಬುವರನ್ನು ನೇಮಿಸಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ನಿರ್ದೇಶಕರ ಹುದ್ದೆ ಗ್ರೂಪ್ ‘ಎ’ ಹುದ್ದೆಯಾಗಿದೆ. ಅರ್ಹತೆ ಇರುವವರನ್ನು ನೇಮಿಸು ಬದಲು ಅನರ್ಹತೆ ಇರುವ ರೇಡಿಯೇಷನ್ ಸೆಫ್ಟಿ ಅಧಿಕಾರಿಯನ್ನು ಕಾನೂನುಬಾಹಿರವಾಗಿ ನೇಮಿಸಲಾಗಿದೆ. ಇದರ ಬಗ್ಗೆ ಸರ್ಕಾರ ಎಚ್ಚೆತ್ತುಗೊಳ್ಳದಿದ್ದರೆ, ಬರುವ ದಿನಗಳಲ್ಲಿ ಕ್ಷ ಕಿರಣ ಸೇವೆಯೇ ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಈ ಹುದ್ದೆಗೆ ನೇಮಿಸಲು ಆರೋಗ್ಯ ಇಲಾಖೆ ಮತ್ತು ಮಂಡಳಿ ನಡುವೆ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಒಪ್ಪಂದ ಅನ್ವಯ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಭೌತಶಾಸದಲ್ಲಿ ಎಂಎಸ್ಸಿ ಪದವಿ ಪಡೆದಿರಬೇಕು. ರೇಡಿಯಾಲಜಿಕಲ್ ಭೌತಶಾಸ್ತ್ರದಲ್ಲಿ ಎಂಎಸ್ಸಿ ಡಿಪ್ಲೊಮಾ ಪಡೆದಿರಬೇಕು. ಜತೆಗೆ, ಪ್ರತಿಷ್ಠಿತ ಅಕಾಡೆಮಿಕ್ ಅಥವಾ ಸಂಶೋಧನೆಗಳ ಸಂಸ್ಥೆಗಳಲ್ಲಿ ವಿಕಿರಣ ಸುರಕ್ಷತೆ ಸಂಬಂಧ ಐದು ವರ್ಷ ಕಾಲ ಕಾರ್ಯನಿರ್ವಹಿಸಿದ ಅನುಭವ ಇರಬೇಕೆಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಬಗ್ಗೆ 2018ರ ಡಿ.27ರಂದು ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಈ ಹುದ್ದೆಗೆ ಅನುಭವ ಹೊಂದಿಲ್ಲದ ವ್ಯಕ್ತಿಯನ್ನು ನೇಮಿಸಲಾಗಿದೆ.

    ರಾಜ್ಯದಲ್ಲಿ ಶೇ.80 ಬಡ ಮತ್ತು ಮಧ್ಯಮ ರೋಗಿಗಳು ನಾನಾ ರೋಗಕ್ಕೆ ಸಂಬಂಧಿಸಿಂತೆ ಎಕ್ಸ್ ರೇ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸೇವೆ ಲಭ್ಯವಿದೆ. ಕೆಲ ಆಸ್ಪತ್ರೆಗಳಲ್ಲಿ ಕ್ಷ ಕಿರಣ ಯಂತ್ರಗಳು ಇಲ್ಲದಂತಾಗಿದೆ. ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ ಸಮರ್ಪಕವಾಗಿ ಸೇವೆ ಸಿಗದಂತಾಗಿದೆ. ರಾಜ್ಯಾದ್ಯಂತ ಕ್ಷ ಕಿರಣ ಸೇವೆ ಬಗ್ಗೆ ನಿರ್ದೇಶನಾಲಯ ಮೇಲ್ವಿಚಾರಣೆ ನಡೆಸುತ್ತಿದೆ. ಕ್ಷ ಕಿರಣ ಹೊರಸೂಸುವ ಯಂತ್ರಗಳಿಂದ ಅಪಾಯ ತಡೆಯುವುದು ಸಂಸ್ಥೆ ಜವಾಬ್ದಾರಿಯಾಗಿದೆ. ಏನಾದರೂ ಕ್ಷ ಕಿರಣದಲ್ಲಿ ಎಡವಟ್ಟಾದರೆ ರೋಗಿಗಳು ಕ್ಯಾನ್ಸರ್‌ನಂಥ ಗಂಭೀರ ಕಾಯಿಲೆ ಸೇರಿ ಅಡ್ಡ ಪರಿಣಾಮಗಳಿಗೆ ತುತ್ತಾಗಬೇಕಾಗುತ್ತದೆ. ಹಾಗಾಗಿ, ಈ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಲು ಅರ್ಹತೆ ಇರುವ ಅಧಿಕಾರಿ ನೇಮಿಸಬೇಕು. ಆದರೆ, ಸೂಕ್ತ ವ್ಯಕ್ತಿಯನ್ನು ನೇಮಿಸದಿರುವ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಕ್ಷ ಕಿರಣ ಸೇವೆ ಸ್ಥಗಿತಗೊಂಡರೆ ಗತಿಯೇನು? ಎಂಬ ಬಗ್ಗೆ ಯಕ್ಷಪಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ.

    Post Views: 330

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.