Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಸ್ಪತ್ರೆಗೆ ದಾಖಲಾಗಿದ್ದ 137 ವಿದ್ಯಾರ್ಥಿನಿಯರು ಡಿಸ್ಚಾರ್ಜ್
    ಇತ್ತೀಚಿನ ಸುದ್ದಿ

    ಆಸ್ಪತ್ರೆಗೆ ದಾಖಲಾಗಿದ್ದ 137 ವಿದ್ಯಾರ್ಥಿನಿಯರು ಡಿಸ್ಚಾರ್ಜ್

    February 8, 2023
    Share

    ಮಂಗಳೂರು: ನಗರದ ಸಿಟಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಫುಡ್ ಪಾಯಿಸನ್ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ದ.ಕ ಆರೋಗ್ಯ ಇಲಾಖೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್​​ಐಆರ್ ದಾಖಲಿಸಿದೆ.

    ಆಸ್ಪತ್ರೆಗೆ ದಾಖಲಾಗಿದ್ದ 137 ಮಂದಿ ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯ ಕಡೆಗೆ ಹೆಜ್ಜೆ ಹಾಕಿದ್ದಾರೆ. ಮಂಗಳೂರು ನಗರದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್‌ನ 137 ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಅವರು ನೀಡಿರುವ ದೂರಿನಂತೆ ಈ ಪ್ರಕರಣ ದಾಖಲು ಮಾಡಲಾಗಿದೆ. ಯಾವುದೋ ಸಂಶಯಾಸ್ಪದ ವಿಷಹಾರಿ ಆಹಾರವನ್ನು ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ನೀಡಲಾಗಿದೆ ಮತ್ತು ಆಹಾರ ತಯಾರಿಕೆ ಹಾಗೂ ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ.

    ಜಿಲ್ಲಾಡಳಿತಕ್ಕೆ ಮಾಹಿತಿ ನೀಡದ ಕಾಲೇಜು ಆಡಳಿತ ಮಂಡಳಿ

    ಆಸ್ವತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೇ ಲೋಪ ಎಸಗಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

    ಆಹಾರ ಸುರಕ್ಷಿತಾಧಿಕಾರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿಗಳು ಜಂಟಿಯಾಗಿ ಹಾಸ್ಟೆಲ್ ನ ಆಹಾರ ತಯಾರಿಕಾ ಕೊಠಡಿಗೆ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಿದೆ.

    ಆಹಾರದ ಮಾದರಿ ಸಂಗ್ರಹ

    ತಯಾರಿಸಿರುವ ಆಹಾರ ಪದಾರ್ಥಗಳು, ಕುಡಿಯುವ ನೀರು ಫ್ರಿಡ್ಜ್ ನಲ್ಲಿದ್ದ ಮಾಂಸ ಇನ್ನಿತರೆ ಆಹಾರ ವಸ್ತುಗಳನ್ನು ತಂಡ ಸಂಗ್ರಹಿಸಿ ಲ್ಯಾಬ್​​ಗೆ ಕಳುಹಿಸುವ ವ್ಯವಸ್ಥೆ ಮಾಡಿದೆ. ಅಲ್ಲದೆ ತಕ್ಷಣದಿಂದ ಅಡುಗೆ ಮನೆಯಲ್ಲಿ ಯಾವುದೇ ಆಹಾರ ಪದಾರ್ಥಗಳನ್ನು ತಯಾರಿಸದಂತೆ ನಿರ್ಬಂಧ ವಿಧಿಸಿದೆ.

    ಪೋಷಕರ ಆಕ್ರೋಶ

    ಅಲ್ಲದೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಯ ಸಭೆ ನಡೆದಿದೆ. ಈ ವೇಳೆ ಪೋಷಕರು ಹಾಸ್ಟೆಲ್ ನ ಅವ್ಯವಸ್ಥೆ, ಸರಿಯಾದ ಆಹಾರ ನೀಡದ ಬಗ್ಗೆ ಆಕ್ರೋಶಿತರಾಗಿದ್ದಾರೆ.

    ವಿದ್ಯಾರ್ಥಿಗಳಿಗೆ ರಜೆ

    ಕೆಲವರು ತಮ್ಮ ಮಕ್ಕಳು ಯಾವ ಆಸ್ಪತ್ರೆಯಲ್ಲಿ ಇದ್ದಾರೆಂದು ಇನ್ನೂ ತಿಳಿದು ಬಂದಿಲ್ಲ ಎಂಬ ಗೊಂದಲದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಬಳಿಕ ಎಸಿಪಿಯವರ ಸಮಕ್ಷಮದಲ್ಲಿ ಪೋಷಕರಿಗೆ ಸಮಾಧಾನ ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

    ಎಲ್ಲರ ಆರೋಗ್ಯ ಸ್ಥಿರ

    ಸದ್ಯ ಆಸ್ಪತ್ರೆಗೆ ದಾಖಲಾಗಿದ್ದ 137 ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದ್ದು, ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಮುಂದೆ ಕಾಲೇಜು ಆರಂಭ ಮಾಡುವ ಮುನ್ನ ಪೋಷಕರ ಸಭೆ ನಡೆಸಿ ಎಲ್ಲಾ ಸರಿಯಾದ ಬಳಿಕವೇ ಕಾಲೇಜು, ಹಾಸ್ಟೆಲ್ ಆರಂಭವಾಗಲಿದೆ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

    Post Views: 140

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.