Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ರಾ.ಪಂ. ನೌಕರರ ಬೇಡಿಕೆಗೆ ಸರಕಾರ ಸ್ಪಂದಿಸದೇ ಇದ್ದಲ್ಲಿ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿಯೂ ಪ್ರತಿಭಟನೆ- ಅಶೋಕ್ ರೈ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಗ್ರಾ.ಪಂ. ನೌಕರರ ಬೇಡಿಕೆಗೆ ಸರಕಾರ ಸ್ಪಂದಿಸದೇ ಇದ್ದಲ್ಲಿ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿಯೂ ಪ್ರತಿಭಟನೆ- ಅಶೋಕ್ ರೈ ಎಚ್ಚರಿಕೆ

    February 8, 2023
    Share

    ಪುತ್ತೂರು: ಸಿ ಮತ್ತು ಡಿ ದರ್ಜೆ ಸ್ಥಾನಮಾನಕ್ಕೆ ಒತ್ತಾಯಿಸಿ ಫೆ.6ರಿಂದ ಬೆಂಗಳೂರಿನ ಫ್ರೀಡಂ‌ ಪಾರ್ಕ್ ನಲ್ಲಿ ನಡೆಯುತ್ತಿರುವ ಗ್ರಾ.ಪಂ.ನೌಕರರ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಸರಕಾರ ಸ್ಪಂದಿಸದೇ ಇದ್ದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಎಚ್ಚರಿಸಿದ್ದಾರೆ.

    ಗ್ರಾಮ ಪಂಚಾಯಿತಿ ನೌಕರರಿಂದ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ನನ್ನ ಬೆಂಬಲ ಇದೆ, ಗ್ರಾಮೀಣ ಮಟ್ಟದಲ್ಲಿ ಸರಕಾರದ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸುವುದೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಗ್ರಾಮ ಪಂಚಾಯತ್ ಕೆಲಸಗಾರರು. ಹಳ್ಳಿಗಳಲ್ಲಿ ಇವರನ್ನೆಲ್ಲಾ ಸರಕಾರಿ ನೌಕರರೆಂದೇ ಜನ ಪರಿಗಣಿಸುತ್ತಾರೆ. ಆದರೆ ಕಳೆದ ಮೂವತ್ತು ಮೂವತ್ತೈದು ವರ್ಷಗಳಿಂದಲೂ ಈ ನೌಕರರ ಪಾಡು ಕೇಳುವವರಿಲ್ಲ. ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ನಿರ್ವಹಿಸಿ ಪಂಚಾಯತ್ ಸುಸೂತ್ರವಾಗಿ ಕೆಲಸ ನಿರ್ವಹಿಸಲು ನೆರವಾಗುತ್ತಿರುವ ಕ್ಲರ್ಕ್ ಗಳು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರು ಬಿಡುವವರು, ಬಿಲ್ ಕಲೆಕ್ಟರ್ ಗಳು, ವಾಹನ ಚಾಲಕರು, ಶುಚಿತ್ವ ನೌಕರರು, ಅಟೆಂಡರುಗಳು ಮುಂತಾದವರಿಗೆ ಯಾವುದೇ ರೀತಿಯ ಉದ್ಯೋಗ ಭದ್ರತೆ ಇಲ್ಲ. ಅವರಿಗೆ ಸರಿಯಾದ ಸಂಬಳ ಇಲ್ಲ. ಅವರನ್ನೆಲ್ಲಾ ಸರಕಾರಗಳು ಜೀತದಾಳುಗಳಂತೆ ದುಡಿಸುತ್ತಿದೆ. ಇವರಿಗೆಲ್ಲ ಕನಿಷ್ಠ ವೇತನವನ್ನಷ್ಟೇ ನೀಡಲಾಗುತ್ತಿದೆ. ಸ್ಥಳೀಯವಾಗಿ ನಮಗೆ ಇರುವಂಥ ಒಂದು ಆಡಳಿತದ ವ್ಯವಸ್ಥೆ ಎಂದರೆ ಗ್ರಾಮ ಪಂಚಾಯತ್. ಇವತ್ತು ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿಗೆ ಈ ನೌಕರರು ನೀಡುವ ಸೇವೆ ಅನನ್ಯವಾಗಿದೆ. ಆದರೆ ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಸಿಬ್ಬಂದಿಗಳನ್ನು ಸರಕಾರ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ.

    ನಮಗೆಲ್ಲರಿಗೂ ಸ್ವಚ್ಛ ಸಮಾಜದ ನಿರ್ಮಾಣಕ್ಕೆ ಪಂಚಾಯತ್ ನೌಕರರು ಮಾಡುವಂತಹ ಸೇವೆ ಅನನ್ಯವಾದದ್ದು. ಆದರೆ ಇಂದು ಅವರ ಬದುಕಿನ ಭದ್ರತೆಗೆ ಬೇಕಾಗಿ ಹೋರಾಟದ ದಾರಿ ಹಿಡಿದಿದ್ದಾರೆ. ಈ ಬಾರಿ ಮತ್ತೆ ಗ್ರಾಮ ಪಂಚಾಯತ್ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಮುಷ್ಕರಕ್ಕೆ ತಾತ್ವಿಕ ನೆಲೆಯಲ್ಲಿ ನನ್ನ ಸಂಪೂರ್ಣ ಬೆಂಬಲವಿದೆ. ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳಿಗೆ ಸರಕಾರ ತಕ್ಷಣವೇ ಸ್ಪಂದಿಸಿ, ಗ್ರಾಮ ಪಂಚಾಯತ್ ನೌಕರರ ಬದುಕಿಗೆ ಭದ್ರತೆ ನೀಡಬೇಕು. ಸರಕಾರ ಸೂಕ್ತವಾಗಿ ಸ್ಪಂದಿಸದೇ ಇದ್ದಲ್ಲಿ ಪ್ರತಿಭಟನೆ ಅನಿವಾರ್ಯ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

    Post Views: 224

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.