Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯ ಸರ್ಕಾರದಿಂದ 14 ಐಎಎಸ್ ಅಧಿಕಾರಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ರಾಜ್ಯ ಸರ್ಕಾರದಿಂದ 14 ಐಎಎಸ್ ಅಧಿಕಾರಿಗಳ ವರ್ಗಾವಣೆ

    February 11, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ ಇಂದು 14 ಐಎಎಸ್ ಹಾಗೂ ಓರ್ವ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.

    ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಸರ್ಕಾರವು, ಕಾಮರ್ಸ್ ಮತ್ತು ಇಂಡಸ್ಟ್ರೀಯಲ್ ಡಿಪಾರ್ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದತಂತ ಡಾ.ರಮಣ ರೆಟ್ಟಿ ಇ.ವಿ ಅವರನ್ನು ಗೌರ್ನಮೆಂಟ್ ಕಮ್ ಡೆವಲಪ್ ಮೆಂಟ್ ಕಮೀಷನರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.

    ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಕಪೀಲ್ ಮೋಹನ್ ಅವರಿಗೆ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ, ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ. ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಕುಮಾರ್ ನಾಯಕ್ ಜಿ ಅವರನ್ನು ಬಿಡಿಎ ಕಮೀಷನರ್ ಆಗಿ ನೇಮಕ ಮಾಡಿದೆ.

    ಉಮಾಶಂಕರ್ ಎಸ್ ಆರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ರಶ್ಮಿ ವಿ ಮಹೇಶ್ ಅವರನ್ನು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

    ಡಾ.ಸೆಲ್ವಕುಮಾರ್ ಎಸ್ ಅವರನ್ನು ಪಬ್ಲಿಕ್ ವರ್ಕ್ ಡಿಪಾರ್ಮೆಂಟ್ ಮುಖ್ಯ ಕಾರ್ಯದರ್ಶಿಯ ಜೊತೆಗೆ, ಹೆಚ್ಚುವರಿಯಾಗಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.

    ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮನೋಜ್ ಜೈನ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯನ್ನಾಗಿ, ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದಂತ ಡಾ.ಶಿವ ಶಂಕರ್ ಎನ್ ಅವರನ್ನು ವರ್ಗಾವಣೆ ಮಾಡಿ, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತಕ್ಕೆ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಿದೆ.

    ಹುದ್ದೆಯ ನಿರೀಕ್ಷೆಯಲ್ಲಿದ್ದಂತ ನಳಿನಿ ಅತುಲ್ ಅವರನ್ನು ನಿರ್ದೇಶಕರು, ಸಾಮಾಜಿಕ ಲೆಕ್ಕಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ನಿಯೋಜಿಸಿದೆ. ಹಾವೇರಿ ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ್ ರೋಷನ್ ಅವರನ್ನು ಹೆಸ್ಕಾಂ ಎಂಡಿಯಾಗಿ, ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಿಸಿದೆ.

    Post Views: 360

    Related Posts

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.