Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿಶಿಲ ಶಿಬಾಜೆಯಲ್ಲಿ ಹತೋಟಿಯತ್ತ ಕಾಳ್ಗಿಚ್ಚು: ನೌಕಾಪಡೆ ತಂಡದಿಂದ ಸರ್ವೇಗೆ ಆಗ್ರಹ
    ಇತ್ತೀಚಿನ ಸುದ್ದಿ

    ಶಿಶಿಲ ಶಿಬಾಜೆಯಲ್ಲಿ ಹತೋಟಿಯತ್ತ ಕಾಳ್ಗಿಚ್ಚು: ನೌಕಾಪಡೆ ತಂಡದಿಂದ ಸರ್ವೇಗೆ ಆಗ್ರಹ

    March 12, 2023
    Share

    ಬೆಳ್ತಂಗಡಿ: ಮಿಯಾರು ಮೀಸಲು ಅರಣ್ಯ ಸಹಿತ ಶಿಬಾಜೆಯಲ್ಲಿ ವಾರದಿಂದ ಸುಡುತ್ತಿದ್ದ ಕಾಳ್ಗಿಚ್ಚು ಶಾಂತರೂಪ ಪಡೆದಿದೆ. ಆದರೆ ಮತ್ತೆ ಅರಣ್ಯವನ್ನು ಆಹುತಿ ಪಡೆಯುವ ಮುನ್ನ ಗೋವಾದ ನೌಕಾಪಡೆ ತಂಡವು ಅರಣ್ಯ ಸಮೀಕ್ಷೆ ನಡೆಸಿ ಜಿಲ್ಲಾ ಕೇಂದ್ರದಲ್ಲಿ ಬೆಂಕಿ ನಂದಿಸಲು ಕನಿಷ್ಠ 2 ಹೆಲಿಕಾಪ್ಟರ್‌ಗಳನ್ನು ನಿಯೋಜಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ.

    ಕುದುರೆಮುಖ ವನ್ಯಜೀವಿ ವಿಭಾಗ ಸಹಿತ ಶಿಶಿಲ, ಶಿಬಾಜೆ, ಮಿಯಾರು, ಸವಣಾಲು, ಶಿರ್ಲಾಲು ವ್ಯಾಪ್ತಿಯ ಮೇಲ್ಭಾಗದ ಅರಣ್ಯ ಬೆಂಕಿಯ ಜ್ವಾಲೆಗೆ ಅಕ್ಷ ರಶಃ ಸುಟ್ಟು ಕರಕಲಾಗಿದೆ. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ, ಸ್ಥಳೀಯ ತಂಡಗಳ ನಿರಂತರ ಕಾರ್ಯಾ ಚರಣೆಯಿಂದ ಬೆಂಕಿ ಶಮನದ ಹಂತದಲ್ಲಿದೆ.

    ಹೆಲಿಕಾಪ್ಟರ್‌ ಬಳಕೆ: ಅಭಿಯಾನ ಮುಂದುವರಿಕೆ
    ಮಂಗಳೂರು: ಹೆಲಿಕಾಪ್ಟರ್‌ ಬಳಸಿ ಕಾಳ್ಗಿಚ್ಚು ನಂದಿಸುವಂತೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಮುಂದುವರಿದಿದೆ.

    ಈ ಕುರಿತು ಮಾ. 10ರಂದು “ಉದಯವಾಣಿ’ ವರದಿ ಮಾಡಿದ್ದು, ಬಹಳಷ್ಟು ಮಂದಿ ವರದಿಯನ್ನು ಟ್ವೀಟ್‌ ಮಾಡಿದ್ದರು. ಪ್ರಧಾನಿ ಮತ್ತು ಮುಖ್ಯಮಂತ್ರಿ ಕಚೇರಿಗೂ ಟ್ಯಾಗ್‌ ಮಾಡಿದ್ದರು. ಸಿಎಂ ಕಚೇರಿ ಯಿಂದಲೇ ಈ ಕುರಿತು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದ್ದರು.

    ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಸ್ಪಂದಿಸಿ, ಹೆಲಿಕಾಪ್ಟರ್‌ ಮೂಲಕ ಅಗ್ನಿಶಮನ ಕಾರ್ಯ ನಡೆಸುವಂತೆ ಸಿಎಂಗೆ ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಕೂಡ ಈ ಕುರಿತು “ಉದಯವಾಣಿ’ ಜತೆ ಮಾತನಾಡಿ, ವಿಚಾರದ ಗಂಭೀರತೆಯ ಅರಿವಿದೆ, ಈ ಬಗ್ಗೆ ತತ್‌ಕ್ಷಣ ಅರಣ್ಯಾಧಿಕಾರಿಗಳೊಂದಿಗೆ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವೆ ಎಂದು ತಿಳಿಸಿದ್ದಾರೆ.

    Post Views: 240

    Related Posts

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.