Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ: ದ.ಕ. ಜಿಲ್ಲಾಧಿಕಾರಿ ಸೂಚನೆ
    ಇತ್ತೀಚಿನ ಸುದ್ದಿ

    ಅನಧಿಕೃತ ಜಾಹೀರಾತು ಫಲಕ ತೆರವು, ಸಭೆ ಸಮಾರಂಭಗಳ ಮೇಲೆ ನಿಗಾ: ದ.ಕ. ಜಿಲ್ಲಾಧಿಕಾರಿ ಸೂಚನೆ

    March 15, 2023
    Share

    ಮಂಗಳೂರು: ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ ಸಭೆ ಸಮಾರಂಭಗಳ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಕಲಾಗಿರುವ ಬ್ಯಾನರ್‌- ಬಂಟಿಂಗ್ಸ್‌ ಮತ್ತು ಫ್ಲೆಕ್ಸ್‌, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು ಎಂದು ಸೂಚಿಸಿರುವ ಜಿಲ್ಲಾಧಿಕಾರಿ, ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್‌ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಹಾಗೂ ಸಂಬಂಧಪಟ್ಟ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

    ಯಾವುದೇ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡುವಾಗ ಸಭೆ ಮುಕ್ತಾಯವಾದ ಅನಂತರ ಬ್ಯಾನರ್‌ -ಬಂಟಿಂಗ್‌ ತೆರವುಗೊಳಿಸಲು ಸೂಚಿಸಬೇಕು. ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಕೊಂಡು ಜಿಲ್ಲಾಡಳಿತಕ್ಕೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ತಮ್ಮ ನೇತೃತ್ವದಲ್ಲಿ ಮೇಲು ಉಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು. ಈ ಕುರಿತ ವರದಿ ಪ್ರತಿದಿನ ಮತ್ತು ಒಟ್ಟಾರೆ ಮಾಹಿತಿ ಪ್ರತೀ ಶನಿವಾರ ಜಿ.ಪಂ. ಸಿಇಒ ಅವರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    Post Views: 207

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.