Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಮೂಲದ ಮುಂಬಯಿ ಹೋಟೆಲ್‌ ಉದ್ಯಮಿಯ ಅಪಹರಣ
    ಇತ್ತೀಚಿನ ಸುದ್ದಿ

    ಕರಾವಳಿ ಮೂಲದ ಮುಂಬಯಿ ಹೋಟೆಲ್‌ ಉದ್ಯಮಿಯ ಅಪಹರಣ

    April 26, 2023
    Share

    ಮುಂಬಯಿ : ಮುಂಬಯಿಯ ಹೋಟೆಲ್‌ ಉದ್ಯಮಿಯೊಬ್ಬರು ಅಪಹರಣಕ್ಕೊಳಗಾದ ಘಟನೆ ಸೋಮವಾರ ಸಂಭವಿಸಿದೆ. ಅಪಹರಣಕ್ಕೊಳಗಾದ ಹೋಟೆಲ್‌ ಉದ್ಯಮಿ ಕರಾವಳಿ ಅನೂಪ್‌ ಶೆಟ್ಟಿ ಎನ್ನಲಾಗಿದೆ. ಸೋಮವಾರ ಮಧ್ಯಾಹ್ನದ ವೇಳೆ ಅಂಧೇರಿ ಪೂರ್ವದ ಚಕಾಲದ ಸರ್‌ ಚಥುರ್‌ದಾಸ್‌ ವಾಸಂಜಿ ರಸ್ತೆಯಲ್ಲಿರುವ ಅವರ ವೀರ ರೆಸಿಡೆನ್ಸಿ ಹೋಟೆಲ್‌ಗೆ ಬಂದ ನಾಲ್ವರು ಏರ್‌ಗನ್‌ ತೋರಿಸಿ ಅನೂಪ್‌ ಶೆಟ್ಟಿಯವರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು ಅನೂಪ್‌ ಶೆಟ್ಟಿಯವರನ್ನು ಮಂಗಳವಾರ ಮಧ್ಯಾಹ್ನ ಪಾರು ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಹಣಕಾಸಿನ ವ್ಯವಹಾರದ ತಗಾದೆಯ ಹಿನ್ನೆಲೆಯಲ್ಲಿ ಈ ಅಪಹರಣವಾಗಿದೆ. ಕೆಲ ಸಮಯ ಹೋಟೆಲ್‌ ವ್ಯವಹಾರದಲ್ಲಿ ಪಾಲುದಾರನಾಗಿದ್ದ ವ್ಯಕ್ತಿಯೇ ಹಣಕಾಸಿನ ವಿಚಾರದಲ್ಲಿ ತಗಾದೆ ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅಪಹರಣಕಾರರಲ್ಲಿ ಇಬ್ಬರು ವೈಟರ್‌ಗಳ ಸೋಗು ಹಾಕಿ ಬೆಳಗ್ಗೆ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿ ಅನೂಪ್‌ ಶೆಟ್ಟಿಯವರ ಮಾಹಿತಿಯನ್ನು ರವಾನಿಸಿದ್ದರು. ಈ ಮೂವರಲ್ಲದೆ ಕಾರು ಚಾಲಕನನ್ನು ಪೊಲೀಸರು ಪಾಡ್ಗಾ ಎಂಬಲ್ಲಿಂದ ಬಂಧಿಸಿ ಅನೂಪ್‌ ಶೆಟ್ಟಿಯವರನ್ನು ಪಾರು ಮಾಡಿದ್ದಾರೆ. ಅಪಹರಿಸುವ ಮೊದಲು ಆರೋಪಿಗಳು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಈ ಗುಂಡು ಹೋಟೆಲ್‌ ಎದುರು ಬಿದ್ದಿತ್ತು. ಇದರಿಂದ ಅವರ ಬಳಿ ಇದ್ದದ್ದು ಏರ್‌ಗನ್‌ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ಲೊಕೇಶನ್‌ ಟ್ರೇಸ್‌ ಮಾಡಿದಾಗ ಕಸಾರ ಘಾಟ್‌ ಸಮೀಪ ಪಾಡ್ಗಾ ಏರಿಯಾದಲ್ಲಿ ಅವರು ಇರುವುದು ಪತ್ತೆಯಾಗಿತ್ತು. ಬಾಕಿಯಿರುವ ಹಣ ಈಗಲೇ ಕೊಡಬೇಕೆಂದು ಹೇಳಿ ಶೆಟ್ಟಿವರನ್ನು ದುಷ್ಕರ್ಮಿಗಳು ಅಪಹರಿಸಿದ್ದರು.ಹೋಟೆಲ್‌ಗೆ ಬಂದ ಪಾಲುದಾರ ಮೊದಲು ಅನೂಪ್‌ ಶೆಟ್ಟಿಯವರ ಜತೆ ಜಗಳವಾಡಿ ಬಳಿಕ ಬಂದೂಕು ತೋರಿಸಿ ಅವರನ್ನು ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ. ಕೂಡಲೇ ಹೋಟೆಲ್‌ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ ಕಾರಣ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿದೆ. ಎಂಐಡಿಸಿ ಠಾನೆ ಪೊಲೀಸರು ಮತ್ತು ಕ್ರಂಬ್ರಾಂಚ್‌ ಪ್ರಕರಣದ ತನಿಖೆ ನಡೆಸುತ್ತಿದೆ.

    Post Views: 245

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.