Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗೋಹತ್ಯೆ ನಿಷೇಧ ಕಾನೂನು ವಾಪಸ್ ಪಡೆದರೆ ಕೋಮು ಸಂಘರ್ಷ ಭೀತಿ: ಶಾಸಕ ಕಾಮತ್
    ಇತ್ತೀಚಿನ ಸುದ್ದಿ

    ಗೋಹತ್ಯೆ ನಿಷೇಧ ಕಾನೂನು ವಾಪಸ್ ಪಡೆದರೆ ಕೋಮು ಸಂಘರ್ಷ ಭೀತಿ: ಶಾಸಕ ಕಾಮತ್

    June 10, 2023
    Share

    ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ’ ಯನ್ನು ಕಾಂಗ್ರೆಸ್ ಸರಕಾರ ವಾಪಸ್ ಪಡೆಯುವ ಸಿದ್ಧತೆಯಲ್ಲಿದ್ದು, ಇದರಿಂದ ಶಾಂತಿಯುತವಾಗಿದ್ದ ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆತಂಕ ವ್ಯಕ್ತಪಡಿಸಿದ್ದಾರೆ.

    ಹಿಂದೂ ಸಂಸ್ಕೃತಿಯಲ್ಲಿ ಗೋವುಗಳಿಗೆ ಪೂಜ್ಯ ಸ್ಥಾನ ಇದೆ. ಗೋ ತಳಿಗಳನ್ನು ಸಂರಕ್ಷಿಸುವ ಮತ್ತು ಭಾವನಾತ್ಮಕ ವಿಚಾರಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತರಲಾಗಿತ್ತು. ಈ ಕಾನೂನು ಜಾರಿಗೆ ಬಂದ ಬಳಿಕ ರಾಜ್ಯದಲ್ಲಿ ಗೋ ಕಳ್ಳತನ, ಅಕ್ರಮ ಖಸಾಯಿಕಾನೆಗಳಿಗೆ ಕಡಿವಾಣ ಬಿದ್ದಿತ್ತು. ಇದರಿಂದ ಕೋಮು ಸಂಘರ್ಷವೂ ಕಡಿಮೆಯಾಗಿತ್ತು. ಇದೀಗ ರಾಜ್ಯ ಸರಕಾರ ಈ ಕಾನೂನನ್ನು ವಾಪಸ್ ಪಡೆದರೆ ಮುಖ್ಯವಾಗಿ ಕರಾವಳಿ ಭಾಗದಲ್ಲಿ ಮನೆಗೆ ನುಗ್ಗಿ ಗೋ ಕಳವು ಮಾಡುವ ಪ್ರಕರಣ ಹೆಚ್ಚಾಗಲಿದೆ. ರೈತಾಪಿ ವರ್ಗದವರಿಗೆ ಇದರಿಂದಾಗಿ ತುಂಬಲಾರದ ನಷ್ಟ ಉಂಟಾಗಲಿದೆ. ವೋಟ್ ಬ್ಯಾಂಕ್ ಸೃಷ್ಟಿಸುವ ಕಾಂಗ್ರೆಸ್ ನ ಈ ಮನಸ್ಥಿತಿಯಿಂದಾಗಿ ಶಾಂತಿಯುತವಾಗಿದ್ದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಅಶಾಂತಿಯ ವಾತಾವರಣ ಸೃಷ್ಟಿಯಾಗಲಿದೆ. ಯಾವುದೇ ಕಾರಣಕ್ಕೂ ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

    ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ದಿನದಿಂದ ಪಠ್ಯ ಬದಲಾವಣೆಗೆ ಹೇಳಿಕೆಗಳು ಬರುತ್ತಿವೆ. ನಮ್ಮ ಅವಧಿಯಲ್ಲಿ ರಾಷ್ಟ್ರೀಯ ವಿಚಾರಧಾರೆಗೆ ಒತ್ತು ಕೊಟ್ಟು ಪಠ್ಯ ಪರಿಷ್ಕರಣೆ ಮಾಡಲಾಗಿತ್ತು. ರಾಷ್ಟ್ರೀಯತೆಯನ್ನು ಕಾಂಗ್ರೆಸ್ ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣದಿಂದ ಪಠ್ಯ ಬದಲಾವಣೆಗೆ ಮುಂದಾಗಿದ್ದಾರೆ. ಯಾವ ಕಾರಣದಿಂದ ಪಠ್ಯ ಬದಲಾವಣೆ ಮಾಡಲಾಗುತ್ತದೆ ಮತ್ತು ಯಾವ ರೀತಿಯಲ್ಲಿ ಪಠ್ಯ ಪರಿಷ್ಕರಿಸಲಾಗುತ್ತದೆ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು. ದೇಶ ವಿರೋಧಿ ಮನಸ್ಥಿತಿ ಹೊಂದಿರುವ ವ್ಯಕ್ತಿಗಳ ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿರುವ ಪಠ್ಯವನ್ನು ಅಳವಡಿಸಿದರೆ ಇದಕ್ಕೆ ನಮ್ಮ ಸ್ಪಷ್ಟ ವಿರೋಧ ಇದೆ ಎಂದು ಕಾಮತ್ ಎಚ್ಚರಿಸಿದರು.ಬಜರಂಗದಳ ನಿಷೇಧ ಮಾಡುವ ಬಗ್ಗೆ ಸಚಿವರು, ಕಾಂಗ್ರೆಸ್ ಮುಖಂಡರಿಂದ ಪದೇ ಪದೇ ಹೇಳಿಕೆಗಳು ಬರುತ್ತಿವೆ. ಸೇವಾ ನಿರತ ಸಂಘಟನೆಯನ್ನು ಪಿಎಫ್ ಐಗೆ ಹೋಲಿಕೆ ಮಾಡಿ ಅದನ್ನು ನಿಷೇಧ ಮಾಡುತ್ತೇವೆ ಎಂದು ಹೇಳುತ್ತಿರುವುದು ತೀರಾ ಬಾಲಿಷವಾದುದು. ಇಂತಹಾ ಕೆಲಸಕ್ಕೆ ಕೈ ಹಾಕಿದರೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

    Post Views: 284

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.