Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ: ಮಳೆ ಪರಿಣಾಮ ಸಾವಿಗೀಡಾದವರ ಕುಟುಂಬಗಳಿಗೆ 5 ಲಕ್ಷ ಪರಿಹಾರ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ: ಮಳೆ ಪರಿಣಾಮ ಸಾವಿಗೀಡಾದವರ ಕುಟುಂಬಗಳಿಗೆ 5 ಲಕ್ಷ ಪರಿಹಾರ

    July 6, 2023
    Share

    ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್‌ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್‌ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ.ಈ ಬಗ್ಗೆ ಮಂಗಳೂರು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.

    ಮೃತರ ವಾರಸುದಾರರಿಗೆ ಮೆಸ್ಕಾಂ ಇಲಾಖಾ ವತಿಯಿಂದ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇನ್ನೊಂದು ಘಟನೆಯಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದ ತನ್ನ ಮನೆ ಸಂಪರ್ಕದ ಮೋರಿಯನ್ನು ದಾಟುವ ವೇಳೆ ಆಯತಪ್ಪಿ ಮೋರಿಯೊಳಗೆ ಬಿದ್ದು ಮೃತಪಟ್ಟಿದ್ದ ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಸುರೇಶ್ ಗಟ್ಟಿ (53 ವರ್ಷ)  ಅವರ ಕುಟುಂಬಕ್ಕೆ ಜಿಲ್ಲಾಡಳಿತದ ವತಿಯಿಂದ ಜು.5ರ ಬುಧವಾರ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲಾಗಿದೆ.

    ಜು.4 ರಂದು ಸಂಜೆ ಸುಮಾರು 7.30ಕ್ಕೆ ಮಳೆ ನೀರು ತುಂಬಿ ಹರಿಯುತ್ತಿದ್ದ ತನ್ನ ಮನೆ ಸಂಪರ್ಕದ ಮೋರಿಯನ್ನು ದಾಟುವ ವೇಳೆ ಆಯತಪ್ಪಿ ಮೋರಿಯೊಳಗೆ ಬಿದ್ದು ಅವರು ಮೃತಪಟ್ಟಿದ್ದರು. ಈ ಬಗ್ಗೆ  ಉಳ್ಳಾಲ ತಾಲೂಕು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.

    ಮೃತರ ವಾರಸುದಾರರಿಗೆ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಪರಿಹಾರ ವಿತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಜಿಲ್ಲಾಧಿಕಾರಿಗಳಿಂದ ನಗರ ಪ್ರದಕ್ಷಿಣೆ:

    ಮಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಜು. 5ರ ಬುಧವಾರ ನಗರ ಪ್ರದಕ್ಷಿಣೆ ಕೈಗೊಂಡಿದ್ದರು.

    ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತೂರು, ಕೆಪಿಟಿ ವೃತ್ತ ಸೇರಿದಂತೆ ವಿವಿಧೆಡೆ ಸಂಚರಿಸಿ, ಮಳೆಯಿಂದ ಉದ್ಬವಿಸಿದ ಪರಿಸ್ಥಿತಿಯನ್ನು ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‌ ಗಳು ಸೇರಿದಂತೆ ಇತರೆ ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗೆ ಇದ್ದರು.

    Post Views: 186

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.