Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆನ್ ಲೈನ್ ಗೇಮಿಂಗ್ ವಂಚನೆಗೆ ಕಡಿವಾಣ ಹಾಕಲು ಮುಂದಾದ ರಾಜ್ಯ  ಸರ್ಕಾರ
    ಇತ್ತೀಚಿನ ಸುದ್ದಿ

    ಆನ್ ಲೈನ್ ಗೇಮಿಂಗ್ ವಂಚನೆಗೆ ಕಡಿವಾಣ ಹಾಕಲು ಮುಂದಾದ ರಾಜ್ಯ  ಸರ್ಕಾರ

    July 12, 2023
    Share

    ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು.

    ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11. ಮೈ  ಸರ್ಕಲ್ ಮುಂತಾದ ಆ್ಯಪ್ ಗಳಿಂದ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಇವರು ತಮ್ಮ ಉದ್ಯೋಗದ ಬಗ್ಗೆ ಹೆಚ್ಚು ಆಸಕ್ತಿಯನ್ನು ವಹಿಸದೆ ದಕ್ಷತೆಯಿಂದ ಕಾರ್ಯ ನಿರ್ವಹಿಸದೇ,  ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.

    ಆ ಮೂಲಕ ಆರ್ಥಿಕ ನಷ್ಟ ಹೊಂದಿ ಮಾನಸಿಕ ತೊಂದರೆಗೊಳಗಾಗುತ್ತಿರುತ್ತಾರೆ, ಜೊತೆಗೆ , ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅನಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು ತಮ್ಮ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ .

    ಹಾಗಾಗಿ ಸರ್ಕಾರ  ಸೋಷಿಯಲ್ ಮಿಡಿಯಾ, ಮಾಧ್ಯಮಗಳು ಮತ್ತು ಪೊಲೀಸ್ ಇಲಾಖೆಯ ಮೂಲಕ ಸೈಬರ್  ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೊತೆಗೆ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸೈಬರ್ ಕ್ರೈಂ ಜಾಗೃತಿ ದಿವಸ’ ಆಚರಣೆ ಮಾಡುತ್ತಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸೈಬರ್ ಅಪರಾಧ ತಡೆಗಟ್ಟುವ ಕುರಿತು. ಜಾಗೃತಿ ಕಾರ್ಯಾಗಾರಗಳನ್ನು ಏರ್ಪಡಿಸಿ ವಂಚನೆಗೆ ಒಳಗಾದಂತೆ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ.

    ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ ಪ್ರಾರಂಭಿಸಿದ್ದು, ಸಾರ್ವಜನಿಕರು ತಮಗೆ ವಂಚನೆಯಾದ ಬಗ್ಗೆ ಈ ಪೋರ್ಟಲ್ ಮುಖಾಂತರ ದೂರು ಸಲ್ಲಿಸಬಹುದಾಗಿದೆ.

    ಸರ್ಕಾರವು 1930 ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದ್ದು, ಸಾರ್ವಜನಿಕರು 24*7 ಹಣ ವಂಚನೆಯಾದ ಬಗ್ಗೆ ತುರ್ತಾಗಿ ಮಾಹಿತಿಯನ್ನು ಒದಗಿಸಬಹುದಾಗಿದೆ

    ಆನ್ ಲೈನ್  ಮೂಲಕ ಸಾಲ ನೀಡಿ ವಂಚನೆ ಮಾಡುವ ಅ್ಯಪ್ ಗಳ ಮೇಲೆ ನಿಗಾ ವಹಿಸಲು ಜಿಲ್ಲಾ ಮಟ್ಟದಲ್ಲಿ ಸಿಐಎನ್ ಪಿಎಸ್  ತೆರೆದಿದ್ದು ಇದಕ್ಕೆ ಇನ್ಸ್ಪೆಕ್ಟರ್ ದರ್ಜೆ ಅಧಿಕಾರಿಯನ್ನು ನೇಮಿಸಿದೆ ಎಂದರು.

    Post Views: 268

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.